Andolana originals

ಓದುಗರ ಪತ್ರ: ‘ಆಂದೋಲನ’ ಸಾರ್ಥಕ ಸೇವೆ

ಆಂದೋಲನ ದಿನ ಪತ್ರಿಕೆಯ ಭಾನುವಾರದ ಸಂಚಿಕೆಯನ್ನು ನೋಡಿ ಸಂತೋಷವಾಯಿತು. ಪತ್ರಿಕೆಯು ೫೩ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಪತ್ರಿಕೆ ಬಗ್ಗೆ ಪ್ರತಿಯೊಬ್ಬರ ಅಭಿಮಾನದ ಮಾತುಗಳನ್ನು ಕೇಳಿ ಸಾರ್ಥಕವೆನಿಸಿತು.

ಪತ್ರಿಕೆಯ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿ ಕತೆಯನ್ನು ಮೆರೆದಿದ್ದಾರೆ. ಇದು ಮೆಚ್ಚುವಂಥ ವಿಚಾರ.

ಆಂದೋಲನ ಯಾವುದೇ ವಿಷಯವನ್ನಾದರೂ ಅಂಜಿಕೆ ಇಲ್ಲದೆ ನಿಷ್ಟುರವಾದರೂ ಸತ್ಯವನ್ನೇ ಹೇಳುತ್ತದೆ. ಅನೇಕ ಪ್ರತಿಭೆಗಳನ್ನು ಪರಿಚಯಿಸಿ ಅವರಿಗೆ ಮತ್ತಷ್ಟು ಪ್ರೋತ್ಸಾಹಗಳನ್ನು ತುಂಬಿದೆ. ಹಲವಾರು ಲೇಖಕರನ್ನು ಬೆಳೆಸಿದ ಹೆಗ್ಗಳಿಕೆ ಆಂದೋಲನ ಪತ್ರಿಕೆಗೆ ಇದೆ.

ಎಲ್ಲರನ್ನೂ ಸೆಳೆಯುವ ಮಾಂತ್ರಿಕ ಶಕ್ತಿ ಈ ಪತ್ರಿಕೆಯಲ್ಲಿ ಅಡಗಿದೆ. ಆಂದೋಲನ ಎತ್ತರವಾಗಿ ಬೆಳೆಯುತ್ತಾ ಎಲ್ಲರ ವಿಶ್ವಾಸ ಗಳಿಸುತ್ತಿದೆ. ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರ ಕಾರ್ಯನಿಷ್ಠೆ, ಪರಿಶ್ರಮವನ್ನು ಮೆಚ್ಚಲೇಬೇಕು. ಮುಂದೆಯೂ ಪತ್ರಿಕೆ ಮನ್ನಣೆ ಗಳಿಸಲಿ. ಪತ್ರಿಕೆಯನ್ನು ಬೆಳೆಸಲು ಸಹಕರಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು.

– ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 mins ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

13 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

15 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

16 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

18 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

21 mins ago