Mysore
26
broken clouds

Social Media

ಬುಧವಾರ, 11 ಮಾರ್ಚ್ 2026
Light
Dark

ಓದುಗರ ಪತ್ರ: ‘ವಂದೇ ಭಾರತ್’ ರೈಲಿನಲ್ಲಿ ‘ಆಂದೋಲನ’ ಪತ್ರಿಕೆ ಒದಗಿಸಲಿ

ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು.

ಕಾಫಿ, ಟೀ, ದಿನಪತ್ರಿಕೆ, ನೀರಿನ ಬಾಟಲಿ, ಬೆಳಗಿನ ತಿಂಡಿ, ಪ್ರಯಾಣ ದರ ಎಲ್ಲಾ ಸೇರಿ ೧,೧೫೯ ರೂ. ತೆಗೆದುಕೊಳ್ಳುತ್ತಾರೆ (ಪ್ಯಾಸೆಂಜರ್ ರೈಲಿನಲ್ಲಿ ೧೬೫ ರೂ. ಮಾತ್ರ, ೨ ಗಂಟೆ ಹೆಚ್ಚುವರಿ ಪಯಣಿಸಬೇಕಷ್ಟೆ) ಆದರೆ ಕನ್ನಡ ದಿನಪತ್ರಿಕೆ ಕೊಟ್ಟಿರಲಿಲ್ಲ. ನಾನು ಅಲ್ಲಿದ್ದ ರೈಲ್ವೆ ಸಿಬ್ಬಂದಿ ಯನ್ನು ಕೇಳಿದೆ. ಅದಕ್ಕೆ ಅವರು ಇಲ್ಲಿಯವ ರೆಗೆ ಯಾರೂ ಕನ್ನಡ ದಿನಪತ್ರಿಕೆ ಕೇಳಿಲ್ಲ. ನೀವೇ ಮೊದಲು ಕೇಳಿದ್ದು ಅಂದರು. ಆದ್ದರಿಂದ ಕನ್ನಡದ ದಿನಪತ್ರಿಕೆ ಅದರಲ್ಲೂ ಸಮಾಜದಲ್ಲಿ ಸಮಾನತೆ ಮತ್ತು ವೈಚಾರಿಕತೆ ಬೆಳೆಸಲು ಕೈ ಜೋಡಿಸಿರುವ ಮೈಸೂರು ಭಾಗದ ‘ಆಂದೋಲನ’ ದಿನಪತ್ರಿಕೆಯನ್ನು ಒದಗಿಸಬೇಕು ಎಂದು ಮಂಡ್ಯ ರೈಲು ನಿಲ್ದಾಣದಲ್ಲಿ ಮನವಿ ಮಾಡುವುದಕ್ಕೆ ಒಡನಾಡಿಗಳ ಜೊತೆ ವಾಟ್ಸಾಪ್‌ನಲ್ಲಿ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಂಡಿದ್ದೇವೆ.

-ಅಭಿ ಒಕ್ಕಲಿಗ, ನಾವು ದ್ರಾವಿಡ ಕನ್ನಡಿಗರು ಚಳವಳಿ, ಮಂಡ್ಯ.

Tags:
error: Content is protected !!