ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು.
ಕಾಫಿ, ಟೀ, ದಿನಪತ್ರಿಕೆ, ನೀರಿನ ಬಾಟಲಿ, ಬೆಳಗಿನ ತಿಂಡಿ, ಪ್ರಯಾಣ ದರ ಎಲ್ಲಾ ಸೇರಿ ೧,೧೫೯ ರೂ. ತೆಗೆದುಕೊಳ್ಳುತ್ತಾರೆ (ಪ್ಯಾಸೆಂಜರ್ ರೈಲಿನಲ್ಲಿ ೧೬೫ ರೂ. ಮಾತ್ರ, ೨ ಗಂಟೆ ಹೆಚ್ಚುವರಿ ಪಯಣಿಸಬೇಕಷ್ಟೆ) ಆದರೆ ಕನ್ನಡ ದಿನಪತ್ರಿಕೆ ಕೊಟ್ಟಿರಲಿಲ್ಲ. ನಾನು ಅಲ್ಲಿದ್ದ ರೈಲ್ವೆ ಸಿಬ್ಬಂದಿ ಯನ್ನು ಕೇಳಿದೆ. ಅದಕ್ಕೆ ಅವರು ಇಲ್ಲಿಯವ ರೆಗೆ ಯಾರೂ ಕನ್ನಡ ದಿನಪತ್ರಿಕೆ ಕೇಳಿಲ್ಲ. ನೀವೇ ಮೊದಲು ಕೇಳಿದ್ದು ಅಂದರು. ಆದ್ದರಿಂದ ಕನ್ನಡದ ದಿನಪತ್ರಿಕೆ ಅದರಲ್ಲೂ ಸಮಾಜದಲ್ಲಿ ಸಮಾನತೆ ಮತ್ತು ವೈಚಾರಿಕತೆ ಬೆಳೆಸಲು ಕೈ ಜೋಡಿಸಿರುವ ಮೈಸೂರು ಭಾಗದ ‘ಆಂದೋಲನ’ ದಿನಪತ್ರಿಕೆಯನ್ನು ಒದಗಿಸಬೇಕು ಎಂದು ಮಂಡ್ಯ ರೈಲು ನಿಲ್ದಾಣದಲ್ಲಿ ಮನವಿ ಮಾಡುವುದಕ್ಕೆ ಒಡನಾಡಿಗಳ ಜೊತೆ ವಾಟ್ಸಾಪ್ನಲ್ಲಿ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಂಡಿದ್ದೇವೆ.
-ಅಭಿ ಒಕ್ಕಲಿಗ, ನಾವು ದ್ರಾವಿಡ ಕನ್ನಡಿಗರು ಚಳವಳಿ, ಮಂಡ್ಯ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…