ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು.
ಕಾಫಿ, ಟೀ, ದಿನಪತ್ರಿಕೆ, ನೀರಿನ ಬಾಟಲಿ, ಬೆಳಗಿನ ತಿಂಡಿ, ಪ್ರಯಾಣ ದರ ಎಲ್ಲಾ ಸೇರಿ ೧,೧೫೯ ರೂ. ತೆಗೆದುಕೊಳ್ಳುತ್ತಾರೆ (ಪ್ಯಾಸೆಂಜರ್ ರೈಲಿನಲ್ಲಿ ೧೬೫ ರೂ. ಮಾತ್ರ, ೨ ಗಂಟೆ ಹೆಚ್ಚುವರಿ ಪಯಣಿಸಬೇಕಷ್ಟೆ) ಆದರೆ ಕನ್ನಡ ದಿನಪತ್ರಿಕೆ ಕೊಟ್ಟಿರಲಿಲ್ಲ. ನಾನು ಅಲ್ಲಿದ್ದ ರೈಲ್ವೆ ಸಿಬ್ಬಂದಿ ಯನ್ನು ಕೇಳಿದೆ. ಅದಕ್ಕೆ ಅವರು ಇಲ್ಲಿಯವ ರೆಗೆ ಯಾರೂ ಕನ್ನಡ ದಿನಪತ್ರಿಕೆ ಕೇಳಿಲ್ಲ. ನೀವೇ ಮೊದಲು ಕೇಳಿದ್ದು ಅಂದರು. ಆದ್ದರಿಂದ ಕನ್ನಡದ ದಿನಪತ್ರಿಕೆ ಅದರಲ್ಲೂ ಸಮಾಜದಲ್ಲಿ ಸಮಾನತೆ ಮತ್ತು ವೈಚಾರಿಕತೆ ಬೆಳೆಸಲು ಕೈ ಜೋಡಿಸಿರುವ ಮೈಸೂರು ಭಾಗದ ‘ಆಂದೋಲನ’ ದಿನಪತ್ರಿಕೆಯನ್ನು ಒದಗಿಸಬೇಕು ಎಂದು ಮಂಡ್ಯ ರೈಲು ನಿಲ್ದಾಣದಲ್ಲಿ ಮನವಿ ಮಾಡುವುದಕ್ಕೆ ಒಡನಾಡಿಗಳ ಜೊತೆ ವಾಟ್ಸಾಪ್ನಲ್ಲಿ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಂಡಿದ್ದೇವೆ.
-ಅಭಿ ಒಕ್ಕಲಿಗ, ನಾವು ದ್ರಾವಿಡ ಕನ್ನಡಿಗರು ಚಳವಳಿ, ಮಂಡ್ಯ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…