ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ ಶೀರ್ಷಕೆಯಡಿ ಪತ್ರವೊಂದು ಪ್ರಕಟಗೊಂಡಿತ್ತು.
ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದ ಕುವೆಂಪುರಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿ ಅಲ್ಲಿ ಬೆಳಕಿನ ವ್ಯವಸ್ಥೆ ಮಾಡದೆ ಕತ್ತಲಲ್ಲಿರುವಂತೆ ಮಾಡಿದ್ದು, ಅವರಿಗೆ ಅಗೌರವ ಸೂಚಿಸಿದಂತಾಗಿತ್ತು. ಆದ್ದರಿಂದ ಕುವೆಂಪುರವರ ಪ್ರತಿಮೆ ಇರುವ ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿತ್ತು.ಓದುಗರ ಪತ್ರ ಪ್ರಕಟಗೊಂಡ ಬಳಿಕ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕುವೆಂಪುರವರ ಪ್ರತಿಮೆಗೆ ವಿದ್ಯುತ್ ದೀಪದ ವ್ಯವಸ್ಥೆಯನ್ನು ಕಲ್ಪಿಸಿ ದ್ದಾರೆ. ಪತ್ರವನ್ನು ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಧನ್ಯವಾದಗಳು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…