ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ ಶೀರ್ಷಕೆಯಡಿ ಪತ್ರವೊಂದು ಪ್ರಕಟಗೊಂಡಿತ್ತು.
ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದ ಕುವೆಂಪುರಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿ ಅಲ್ಲಿ ಬೆಳಕಿನ ವ್ಯವಸ್ಥೆ ಮಾಡದೆ ಕತ್ತಲಲ್ಲಿರುವಂತೆ ಮಾಡಿದ್ದು, ಅವರಿಗೆ ಅಗೌರವ ಸೂಚಿಸಿದಂತಾಗಿತ್ತು. ಆದ್ದರಿಂದ ಕುವೆಂಪುರವರ ಪ್ರತಿಮೆ ಇರುವ ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿತ್ತು.ಓದುಗರ ಪತ್ರ ಪ್ರಕಟಗೊಂಡ ಬಳಿಕ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕುವೆಂಪುರವರ ಪ್ರತಿಮೆಗೆ ವಿದ್ಯುತ್ ದೀಪದ ವ್ಯವಸ್ಥೆಯನ್ನು ಕಲ್ಪಿಸಿ ದ್ದಾರೆ. ಪತ್ರವನ್ನು ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಧನ್ಯವಾದಗಳು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…