ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ ಶೀರ್ಷಕೆಯಡಿ ಪತ್ರವೊಂದು ಪ್ರಕಟಗೊಂಡಿತ್ತು.
ಎಲ್ಲೆಡೆ ಕನ್ನಡದ ಕಂಪನ್ನು ಪಸರಿಸಿದ ಕುವೆಂಪುರಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಸ್ಥಾಪಿಸಿ ಅಲ್ಲಿ ಬೆಳಕಿನ ವ್ಯವಸ್ಥೆ ಮಾಡದೆ ಕತ್ತಲಲ್ಲಿರುವಂತೆ ಮಾಡಿದ್ದು, ಅವರಿಗೆ ಅಗೌರವ ಸೂಚಿಸಿದಂತಾಗಿತ್ತು. ಆದ್ದರಿಂದ ಕುವೆಂಪುರವರ ಪ್ರತಿಮೆ ಇರುವ ಆವರಣವನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿತ್ತು.ಓದುಗರ ಪತ್ರ ಪ್ರಕಟಗೊಂಡ ಬಳಿಕ ಎಚ್ಚೆತ್ತುಕೊಂಡ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕುವೆಂಪುರವರ ಪ್ರತಿಮೆಗೆ ವಿದ್ಯುತ್ ದೀಪದ ವ್ಯವಸ್ಥೆಯನ್ನು ಕಲ್ಪಿಸಿ ದ್ದಾರೆ. ಪತ್ರವನ್ನು ಪ್ರಕಟಿಸಿದ ‘ಆಂದೋಲನ’ ಪತ್ರಿಕೆಗೆ ಧನ್ಯವಾದಗಳು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…