Andolana originals

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ ಸಾರಸ್ವತ ಲೋಕಕ್ಕೆ ಸಂದ ಗೌರವವಾಗಿದೆ. ತಮ್ಮ  ಮನೆಯನ್ನೇ ಗ್ರಂಥಾಲಯವನ್ನಾಗಿ ಮಾಡಿ ಕೊಂಡು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಓದುಗರಿಗೆ ಉಚಿತವಾಗಿ ಪುಸ್ತಕವನ್ನು ಓದಲು ನೀಡುತ್ತಿದ್ದಾರೆ. ಅಲ್ಲಿಯೇ ಓದಿ ಪುಸ್ತಕಗಳನ್ನು ಇಡಬೇಕು, ಅಲ್ಲಿ ಯಾವುದೇ ರೀತಿಯ ರಿಜಿಸ್ಟರ್ ಇರುವುದಿಲ್ಲ. ಪುಸ್ತಕಗಳೆಂದರೆ ಇವರಿಗೆ ಅವರ್ಣನೀಯ ಪ್ರೀತಿ. ತಮಗೆ ಬರುವ ಪಿಂಚಣಿ ಸಂಬಳದಲ್ಲಿ ಬಹು ಪಾಲುಹಣ ವನ್ನು ಪುಸ್ತಕಗಳ ಖರೀದಿಗೆ ಮೀಸಲಿಟ್ಟಿರುತ್ತಾರೆ. ಮತ್ತೊಂದು ವಿಷಯವೆಂದರೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ತಮ್ಮ ಸ್ವಂತ ನಿವೇಶನವನ್ನು ಮಾರಿ ಜ್ಞಾನ ದೇಗುಲವನ್ನು ನಿರ್ಮಿಸಿದ್ದಾರೆ. ಸುಮಾರು ೨೫ ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಇವರಿಗೆ ಪುಸ್ತಕದ ಪ್ರೇಮ ೨೨ನೇ ವಯಸ್ಸಿನಲ್ಲಿ ಪ್ರಾರಂಭವಾಯಿತು. ಸುಮಾರು ೫೬ ವರ್ಷಗಳಿಂದ ಸತತವಾಗಿ ಪುಸ್ತಕಗಳನ್ನು ಸಂಗ್ರಹಿಸಿ ಜ್ಞಾನದ ದಾಸೋಹವನ್ನು ಪಸರಿಸುತ್ತಿದ್ದಾರೆ. ಒಂದು ಗ್ರಂಥಾಲಯದಲ್ಲಿ ಮೂರು ನಾಲ್ಕು ಸಾವಿರ ಪುಸ್ತಕಗಳಿದ್ದರೆ ಅದರ ನಿರ್ವಹಣೆಗಾಗಿ ಮೂರು ನಾಲ್ಕು ನೌಕರರು ಇರುತ್ತಾರೆ. ಆದರೆ ಇಲ್ಲಿ ಇವರೊಬ್ಬರೇ ಪುಸ್ತಕ ಮನೆಯನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿದ್ದಾರೆ. ಈಗಷ್ಟೇ ಇವರ ಜ್ಞಾನದ ದಾಸೋಹದ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿದೆ. ಇವರಿಗೆ ಪ್ರೀತಿಪೂರ್ವಕ ಅಭಿನಂದನೆಗಳು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago