ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣಗಳು ಮುಂಚೂಣಿಯಲ್ಲಿ ಜಗಜಗಿಸಿರುವುದು ಪ್ರತಿಯೊಬ್ಬ ಭಾರತೀಯನ ಅಭಿಮಾನದ ಪರಾಕಾಷ್ಠೆಯಾಗಿದೆ.
ಈ ಐತಿಹಾಸಿಕ ದೃಶ್ಯವು ಕೇವಲ ಕಣ್ಣಿಗೆ ಹಬ್ಬವಲ್ಲ, ಮನಸ್ಸಿಗೆ ರೋಮಾಂಚನವನ್ನು ಉಂಟು ಮಾಡುವಂತಿತ್ತು. ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಯುಎಇ ನಡುವೆ ಬಲಗೊಳ್ಳುತ್ತಿರುವ ದ್ವಿಪಕ್ಷೀಯ ಸಂಬಂಧ ಹಾಗೂ ಪರಸ್ಪರ ಗೌರವಕ್ಕೆ ಇದು ಕನ್ನಡಿಯಾಗಿದೆ.
ಇದು ವಿಶ್ವ ವೇದಿಕೆಯಲ್ಲಿ ನಮ್ಮ ದೇಶಕ್ಕಿರುವ ಅಗಾಧ ಗೌರವ ಹಾಗೂ ಜನಾನುರಾಗಕ್ಕೆ ಜ್ವಲಂತ ಸಾಕ್ಷಿಯಾಗಿದೆ. ಇದರ ಜೊತೆಗೆ, ಅಫ್ಘಾನಿಸ್ತಾನದಂತಹ ರಾಷ್ಟ್ರಗಳ ಜನಸಾಮಾನ್ಯರೂ ಭಾರತದ ಧ್ವಜವನ್ನು ಹಿಡಿದು ಸಂಭ್ರಮಾಚರಣೆ ಮಾಡಿರುವುದು ನಿಜಕ್ಕೂ ಗಮನಾರ್ಹ. ವಿದೇಶಿ ನೆಲದಲ್ಲಿ ನಮ್ಮ ರಾಷ್ಟ್ರಧ್ವಜ ಹೀಗೆ ರಾರಾಜಿಸುವುದನ್ನು ಕಾಣುವುದು ನಮ್ಮ ಪ್ರಜಪ್ರಭುತ್ವದ ಬಲ ಹಾಗೂ ಜಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ನಮ್ಮ ದೇಶದ ಪ್ರಭಾವಕ್ಕೆ ಸಾಕ್ಷಿಯಾಗಿದೆ. ಅಂತರ ರಾಷ್ಟ್ರೀಯ ಸಮುದಾಯದಲ್ಲಿ ಭಾರತದ ಸ್ಥಾನಮಾನ ದಿನದಿಂದ ದಿನಕ್ಕೆ ಎತ್ತರಕ್ಕೇರುತ್ತಿರುವುದು ಹೆಮ್ಮೆಯ ಸಂಗತಿ.
-ಬಿ.ಗಣೇಶ, ಮೈಸೂರು
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…