Categories: Andolana originals

ಓದುಗರ ಪತ್ರ: ಎಪಿಎಲ್ ಕಾರ್ಡುದಾರರ ಬಗ್ಗೆ ತಾತ್ಸಾರವೇಕೆ?

ಸರ್ಕಾರ ಎಪಿಎಲ್ ಕಾರ್ಡುದಾರರನ್ನು ಕೇವಲ ತೆರಿಗೆ ಪಾವತಿಸುವುದಕ್ಕೆ ಮಾತ್ರ ಸೀಮಿತ ಮಾಡಿಕೊಂಡಿದೆಯೇನೋ ಅನಿಸುತ್ತದೆ. ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದೆಯೇ ವಿನಾ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸುತ್ತಿದೆ.

ಎಪಿಎಲ್ ಪಡಿತರ ಚೀಟಿದಾರರಿಗೆ 15 ರೂ.ನಂತೆ ಮಾಸಿಕ 5 ಕೆ.ಜಿ. ಅಕ್ಕಿ ಕೊಡುತ್ತಿರುವುದನ್ನು ಬಿಟ್ಟರೆ ಇನ್ಯಾವುದೇ ಪಡಿತರ ಪದಾರ್ಥಗಳು ಇವರಿಗೆ ಸಿಗುತ್ತಿರಲಿಲ್ಲ.

ಕೆಲ ದಿನಗಳಿಂದ ಅಕ್ಕಿಯೂ ಲಭ್ಯವಾಗುತ್ತಿಲ್ಲ. ಇಂತಹ ಪಕ್ಷಪಾತ ಧೋರಣೆಗಳು ಏಕೆ? ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ನೀಡುವುದರಲ್ಲಿ ನ್ಯಾಯವಿದೆ. ಹಾಗಂದ ಮಾತ್ರಕ್ಕೆ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸಿ ಅವರಿಗೆ ಪಡಿತರವನ್ನೇ ನೀಡದೆ ಇರುವುದು ನ್ಯಾಯವೇ? ತೆರಿಗೆ ಪಾವತಿಸಲು ಎಪಿಎಲ್ ಕಾರ್ಡುದಾರರು ಬೇಕು, ಪಡಿತರಕ್ಕೆ ಬೇಡವೇ? ಬಿಪಿಎಲ್ ಕಾರ್ಡುದಾರರಿಗೆ ಪಡಿತರ ನೀಡಿದ ಬಳಿಕ ಉಳಿದ ಆಹಾರ ಪದಾರ್ಥಗಳನ್ನು ಸ್ವಲ್ಪ ಹೆಚ್ಚಿನ ದರದಲ್ಲಿ ಎಪಿಎಲ್ ಕಾರ್ಡುದಾರರಿಗೆ ನೀಡಬಹುದಲ್ಲವೇ?

ಇನ್ನು ಎಪಿಎಲ್ ಕಾರ್ಡುದಾರರು ತಿದ್ದುಪಡಿಯ ವಿಚಾರಕ್ಕೆ ಸಂಬಂಧಿಸಿದಂತೆ 4-5 ತಿಂಗಳುಗಳ ಹಿಂದೆಯೇ ದಾಖಲೆಗಳನ್ನು ಸಲ್ಲಿಸಿದರೂ ಇನ್ನೂ ಕಾರ್ಡುಗಳು ಅವರ ಕೈ ಸೇರಿಲ್ಲ. ಈ ಬಗ್ಗೆ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಿದರೆ, ಎಪಿಎಲ್ ಪಡಿತರ ಚೀಟಿ ವಿತರಿಸಲು ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಎಪಿಎಲ್‌ ಕಾರ್ಡುದಾರರಿಗೂ ಸೌಲಭ್ಯ ಒದಗಿಸಲಿ

-ಎ.ಎಸ್‌.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago