ಸರ್ಕಾರ ಎಪಿಎಲ್ ಕಾರ್ಡುದಾರರನ್ನು ಕೇವಲ ತೆರಿಗೆ ಪಾವತಿಸುವುದಕ್ಕೆ ಮಾತ್ರ ಸೀಮಿತ ಮಾಡಿಕೊಂಡಿದೆಯೇನೋ ಅನಿಸುತ್ತದೆ. ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದೆಯೇ ವಿನಾ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸುತ್ತಿದೆ.
ಎಪಿಎಲ್ ಪಡಿತರ ಚೀಟಿದಾರರಿಗೆ 15 ರೂ.ನಂತೆ ಮಾಸಿಕ 5 ಕೆ.ಜಿ. ಅಕ್ಕಿ ಕೊಡುತ್ತಿರುವುದನ್ನು ಬಿಟ್ಟರೆ ಇನ್ಯಾವುದೇ ಪಡಿತರ ಪದಾರ್ಥಗಳು ಇವರಿಗೆ ಸಿಗುತ್ತಿರಲಿಲ್ಲ.
ಕೆಲ ದಿನಗಳಿಂದ ಅಕ್ಕಿಯೂ ಲಭ್ಯವಾಗುತ್ತಿಲ್ಲ. ಇಂತಹ ಪಕ್ಷಪಾತ ಧೋರಣೆಗಳು ಏಕೆ? ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ನೀಡುವುದರಲ್ಲಿ ನ್ಯಾಯವಿದೆ. ಹಾಗಂದ ಮಾತ್ರಕ್ಕೆ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸಿ ಅವರಿಗೆ ಪಡಿತರವನ್ನೇ ನೀಡದೆ ಇರುವುದು ನ್ಯಾಯವೇ? ತೆರಿಗೆ ಪಾವತಿಸಲು ಎಪಿಎಲ್ ಕಾರ್ಡುದಾರರು ಬೇಕು, ಪಡಿತರಕ್ಕೆ ಬೇಡವೇ? ಬಿಪಿಎಲ್ ಕಾರ್ಡುದಾರರಿಗೆ ಪಡಿತರ ನೀಡಿದ ಬಳಿಕ ಉಳಿದ ಆಹಾರ ಪದಾರ್ಥಗಳನ್ನು ಸ್ವಲ್ಪ ಹೆಚ್ಚಿನ ದರದಲ್ಲಿ ಎಪಿಎಲ್ ಕಾರ್ಡುದಾರರಿಗೆ ನೀಡಬಹುದಲ್ಲವೇ?
ಇನ್ನು ಎಪಿಎಲ್ ಕಾರ್ಡುದಾರರು ತಿದ್ದುಪಡಿಯ ವಿಚಾರಕ್ಕೆ ಸಂಬಂಧಿಸಿದಂತೆ 4-5 ತಿಂಗಳುಗಳ ಹಿಂದೆಯೇ ದಾಖಲೆಗಳನ್ನು ಸಲ್ಲಿಸಿದರೂ ಇನ್ನೂ ಕಾರ್ಡುಗಳು ಅವರ ಕೈ ಸೇರಿಲ್ಲ. ಈ ಬಗ್ಗೆ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಿದರೆ, ಎಪಿಎಲ್ ಪಡಿತರ ಚೀಟಿ ವಿತರಿಸಲು ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಎಪಿಎಲ್ ಕಾರ್ಡುದಾರರಿಗೂ ಸೌಲಭ್ಯ ಒದಗಿಸಲಿ
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…