ಸರ್ಕಾರ ಎಪಿಎಲ್ ಕಾರ್ಡುದಾರರನ್ನು ಕೇವಲ ತೆರಿಗೆ ಪಾವತಿಸುವುದಕ್ಕೆ ಮಾತ್ರ ಸೀಮಿತ ಮಾಡಿಕೊಂಡಿದೆಯೇನೋ ಅನಿಸುತ್ತದೆ. ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದೆಯೇ ವಿನಾ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸುತ್ತಿದೆ.
ಎಪಿಎಲ್ ಪಡಿತರ ಚೀಟಿದಾರರಿಗೆ 15 ರೂ.ನಂತೆ ಮಾಸಿಕ 5 ಕೆ.ಜಿ. ಅಕ್ಕಿ ಕೊಡುತ್ತಿರುವುದನ್ನು ಬಿಟ್ಟರೆ ಇನ್ಯಾವುದೇ ಪಡಿತರ ಪದಾರ್ಥಗಳು ಇವರಿಗೆ ಸಿಗುತ್ತಿರಲಿಲ್ಲ.
ಕೆಲ ದಿನಗಳಿಂದ ಅಕ್ಕಿಯೂ ಲಭ್ಯವಾಗುತ್ತಿಲ್ಲ. ಇಂತಹ ಪಕ್ಷಪಾತ ಧೋರಣೆಗಳು ಏಕೆ? ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ನೀಡುವುದರಲ್ಲಿ ನ್ಯಾಯವಿದೆ. ಹಾಗಂದ ಮಾತ್ರಕ್ಕೆ ಎಪಿಎಲ್ ಕಾರ್ಡುದಾರರನ್ನು ಕಡೆಗಣಿಸಿ ಅವರಿಗೆ ಪಡಿತರವನ್ನೇ ನೀಡದೆ ಇರುವುದು ನ್ಯಾಯವೇ? ತೆರಿಗೆ ಪಾವತಿಸಲು ಎಪಿಎಲ್ ಕಾರ್ಡುದಾರರು ಬೇಕು, ಪಡಿತರಕ್ಕೆ ಬೇಡವೇ? ಬಿಪಿಎಲ್ ಕಾರ್ಡುದಾರರಿಗೆ ಪಡಿತರ ನೀಡಿದ ಬಳಿಕ ಉಳಿದ ಆಹಾರ ಪದಾರ್ಥಗಳನ್ನು ಸ್ವಲ್ಪ ಹೆಚ್ಚಿನ ದರದಲ್ಲಿ ಎಪಿಎಲ್ ಕಾರ್ಡುದಾರರಿಗೆ ನೀಡಬಹುದಲ್ಲವೇ?
ಇನ್ನು ಎಪಿಎಲ್ ಕಾರ್ಡುದಾರರು ತಿದ್ದುಪಡಿಯ ವಿಚಾರಕ್ಕೆ ಸಂಬಂಧಿಸಿದಂತೆ 4-5 ತಿಂಗಳುಗಳ ಹಿಂದೆಯೇ ದಾಖಲೆಗಳನ್ನು ಸಲ್ಲಿಸಿದರೂ ಇನ್ನೂ ಕಾರ್ಡುಗಳು ಅವರ ಕೈ ಸೇರಿಲ್ಲ. ಈ ಬಗ್ಗೆ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಿದರೆ, ಎಪಿಎಲ್ ಪಡಿತರ ಚೀಟಿ ವಿತರಿಸಲು ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಎಪಿಎಲ್ ಕಾರ್ಡುದಾರರಿಗೂ ಸೌಲಭ್ಯ ಒದಗಿಸಲಿ
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…