Andolana originals

ಓದುಗರ ಪತ್ರ: ಆಪ್ ಆಧಾರಿತ ಆಟೋ ಚಾಲಕರಿಂದ ದುಬಾರಿ ಬಾಡಿಗೆ ವಸೂಲಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಓಲಾ, ಊಬರ್ ಹಾಗೂ ರ‍್ಯಾಪಿಡೋ ಆಟೋ ಚಾಲಕರು ಗ್ರಾಹಕರಿಂದ ದುಪ್ಪಟ್ಟು ಬಾಡಿಗೆ ಪಡೆಯುತ್ತಿದ್ದಾರೆ. ಉದಾಹರಣೆಗೆ ರಾತ್ರಿ ವೇಳೆ ಮೈಸೂರಿನ ರೈಲು ನಿಲ್ದಾಣದಿಂದ ಹೆಬ್ಬಾಳಕ್ಕೆ ತೆರಳಲು ಆನ್‌ಲೈನ್ ಮೂಲಕ ಆಟೋ ಬುಕ್ ಮಾಡಿದರೆ ಫೋನ್ ಮಾಡಿ ೩೦೦ ರೂ. ಕೊಟ್ಟರೆ ಮಾತ್ರ ಬರುತ್ತೇವೆ, ಇಲ್ಲದಿದ್ದರೆ ಬರುವುದಿಲ್ಲ ಎಂದು ದರ್ಪ ತೋರಿಸುತ್ತಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲವೇ? ಮನಸೋ ಇಚ್ಛೆ ಹೀಗೆ ಹಣ ಕೇಳಿದರೆ ಗ್ರಾಹಕ ಎಲ್ಲಿಗೆ ಹೋಗಬೇಕು? ಮೀಟರ್ ಪ್ರಕಾರ ಹಣ ಪಡೆಯುವುದನ್ನು ನಿಲ್ಲಿಸಿ ಸುಮಾರು ವರ್ಷಗಳೇ ಕಳೆದಿವೆ. ಇದೆಲ್ಲವನ್ನು ಹೋಲಿಸಿದರೆ ಪ್ರೀಪೇಯ್ಡ್ ಆಟೋ ಸೇವೆ ಸ್ವಲ್ಪ ಪರವಾಗಿಲ್ಲ. ರಾತ್ರಿ ೯ ಗಂಟೆ ನಂತರ ಒಂದೂವರೆ ಪಟ್ಟು ದರದಂತೆ ಬಾಡಿಗೆ ಪಡೆಯುತ್ತಾರೆ. ಹೈಕೋರ್ಟ್ ಆದೇಶದಂತೆ ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ರದ್ದುಮಾಡಲಾಗಿದೆ. ಇದರಿಂದಲೂ ಗ್ರಾಹಕರಿಗೆ ಸಾಕಷ್ಟು ತೊಂದರೆಯಾಗಿದೆ. ಏಕೆಂದರೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಕೈಗೆಟುಕುವ ದರದಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಓಲಾ, ಊಬರ್ ಹಾಗೂ  ರ‍್ಯಾಪಿಡೋ ಕಂಪೆನಿಗಳು ಹಾಗೂ ಸಾರಿಗ ಇಲಾಖೆ ಅಧಿಕಾರಿಗಳು ಆಟೋ ಚಾಲಕರಿಗೆ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಬೇಕಿದೆ.

– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

59 seconds ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

16 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago