Andolana originals

ಓದುಗರ ಪತ್ರ: ಆಪ್ ಆಧಾರಿತ ಆಟೋ ಚಾಲಕರಿಂದ ದುಬಾರಿ ಬಾಡಿಗೆ ವಸೂಲಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಓಲಾ, ಊಬರ್ ಹಾಗೂ ರ‍್ಯಾಪಿಡೋ ಆಟೋ ಚಾಲಕರು ಗ್ರಾಹಕರಿಂದ ದುಪ್ಪಟ್ಟು ಬಾಡಿಗೆ ಪಡೆಯುತ್ತಿದ್ದಾರೆ. ಉದಾಹರಣೆಗೆ ರಾತ್ರಿ ವೇಳೆ ಮೈಸೂರಿನ ರೈಲು ನಿಲ್ದಾಣದಿಂದ ಹೆಬ್ಬಾಳಕ್ಕೆ ತೆರಳಲು ಆನ್‌ಲೈನ್ ಮೂಲಕ ಆಟೋ ಬುಕ್ ಮಾಡಿದರೆ ಫೋನ್ ಮಾಡಿ ೩೦೦ ರೂ. ಕೊಟ್ಟರೆ ಮಾತ್ರ ಬರುತ್ತೇವೆ, ಇಲ್ಲದಿದ್ದರೆ ಬರುವುದಿಲ್ಲ ಎಂದು ದರ್ಪ ತೋರಿಸುತ್ತಾರೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಇವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲವೇ? ಮನಸೋ ಇಚ್ಛೆ ಹೀಗೆ ಹಣ ಕೇಳಿದರೆ ಗ್ರಾಹಕ ಎಲ್ಲಿಗೆ ಹೋಗಬೇಕು? ಮೀಟರ್ ಪ್ರಕಾರ ಹಣ ಪಡೆಯುವುದನ್ನು ನಿಲ್ಲಿಸಿ ಸುಮಾರು ವರ್ಷಗಳೇ ಕಳೆದಿವೆ. ಇದೆಲ್ಲವನ್ನು ಹೋಲಿಸಿದರೆ ಪ್ರೀಪೇಯ್ಡ್ ಆಟೋ ಸೇವೆ ಸ್ವಲ್ಪ ಪರವಾಗಿಲ್ಲ. ರಾತ್ರಿ ೯ ಗಂಟೆ ನಂತರ ಒಂದೂವರೆ ಪಟ್ಟು ದರದಂತೆ ಬಾಡಿಗೆ ಪಡೆಯುತ್ತಾರೆ. ಹೈಕೋರ್ಟ್ ಆದೇಶದಂತೆ ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ರದ್ದುಮಾಡಲಾಗಿದೆ. ಇದರಿಂದಲೂ ಗ್ರಾಹಕರಿಗೆ ಸಾಕಷ್ಟು ತೊಂದರೆಯಾಗಿದೆ. ಏಕೆಂದರೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಕೈಗೆಟುಕುವ ದರದಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿತ್ತು. ಓಲಾ, ಊಬರ್ ಹಾಗೂ  ರ‍್ಯಾಪಿಡೋ ಕಂಪೆನಿಗಳು ಹಾಗೂ ಸಾರಿಗ ಇಲಾಖೆ ಅಧಿಕಾರಿಗಳು ಆಟೋ ಚಾಲಕರಿಗೆ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಬೇಕಿದೆ.

– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

47 mins ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

3 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

3 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

18 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

18 hours ago