ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕೂಡ ಲಭ್ಯ ಇಲ್ಲ. ಇದರಿಂದ ಗರ್ಭಿಣಿಯರು, ವಯೋವೃದ್ಧರಿಗೆ ತುರ್ತು ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಈ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಅನಾರೋಗ್ಯಪೀಡಿತರು ಮೈಸೂರು, ತಿ.ನರಸೀಪುರ, ತಗಡೂರು… ಹೀಗೆ ಅಕ್ಕಪಕ್ಕದ ಊರುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಲಂಬಿಸುವಂತೆ ಆಗಿದೆ. ಹಾಗಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುತ್ತೂರಿನ ಪಿಎಚ್ಸಿಗೆ ವೈದ್ಯರು, ಸಹಾಯಕರು, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಅಲ್ಲದೆ, ಕೇಂದ್ರಕ್ಕೆ ಕಾನೂನಾತ್ಮಕವಾಗಿ ಒದಗಿಸಬೇಕಾದ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು.
-ಆರ್.ಚಂದು, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…