ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕೂಡ ಲಭ್ಯ ಇಲ್ಲ. ಇದರಿಂದ ಗರ್ಭಿಣಿಯರು, ವಯೋವೃದ್ಧರಿಗೆ ತುರ್ತು ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಈ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಅನಾರೋಗ್ಯಪೀಡಿತರು ಮೈಸೂರು, ತಿ.ನರಸೀಪುರ, ತಗಡೂರು… ಹೀಗೆ ಅಕ್ಕಪಕ್ಕದ ಊರುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಲಂಬಿಸುವಂತೆ ಆಗಿದೆ. ಹಾಗಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುತ್ತೂರಿನ ಪಿಎಚ್ಸಿಗೆ ವೈದ್ಯರು, ಸಹಾಯಕರು, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಅಲ್ಲದೆ, ಕೇಂದ್ರಕ್ಕೆ ಕಾನೂನಾತ್ಮಕವಾಗಿ ಒದಗಿಸಬೇಕಾದ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು.
-ಆರ್.ಚಂದು, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…