Andolana originals

ಸುತ್ತೂರು ಪಿಎಚ್‌ಸಿಗೆ ವೈದ್ಯರನ್ನು ನೇಮಿಸಿ

ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕೂಡ ಲಭ್ಯ ಇಲ್ಲ. ಇದರಿಂದ ಗರ್ಭಿಣಿಯರು, ವಯೋವೃದ್ಧರಿಗೆ ತುರ್ತು ಚಿಕಿತ್ಸೆ ಸಿಗುವುದು ಕಷ್ಟಸಾಧ್ಯವಾಗಿದೆ. ಈ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ಇಲ್ಲದ ಕಾರಣ, ಅನಾರೋಗ್ಯಪೀಡಿತರು ಮೈಸೂರು, ತಿ.ನರಸೀಪುರ, ತಗಡೂರು… ಹೀಗೆ ಅಕ್ಕಪಕ್ಕದ ಊರುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅವಲಂಬಿಸುವಂತೆ ಆಗಿದೆ. ಹಾಗಾಗಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುತ್ತೂರಿನ ಪಿಎಚ್‌ಸಿಗೆ ವೈದ್ಯರು, ಸಹಾಯಕರು, ಸಿಬ್ಬಂದಿಯನ್ನು ನೇಮಕ ಮಾಡಬೇಕು. ಅಲ್ಲದೆ, ಕೇಂದ್ರಕ್ಕೆ ಕಾನೂನಾತ್ಮಕವಾಗಿ ಒದಗಿಸಬೇಕಾದ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸಿಕೊಡಬೇಕು.
-ಆರ್.ಚಂದು, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

11 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

11 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

12 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

13 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

13 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

16 hours ago