Andolana originals

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ಸ್ವಾಗತಾರ್ಹ

ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು.

ಕೆಲವು ಕಾಲೇಜು ವಿದ್ಯಾರ್ಥಿಗಳೂ ಇದನ್ನು ಅರೆಕಾಲಿಕ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಇದರಿಂದ ಬಂದ ಸಂಪಾದನೆಯಿಂದ ತಮ್ಮ ಖರ್ಚನ್ನು ಸರಿದೂಗಿಸಿಕೊಳ್ಳುತ್ತಿದ್ದರು. ಸದ್ಯ ಇದಕ್ಕೆ ಪೂರಕವಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ೧೯೮೮ರ ಮೋಟಾರು ವಾಹನ ಕಾಯ್ದೆ ಅನ್ವಯ ಅಗ್ರಿ ಗೇಟರ್ ಮಾರ್ಗಸೂಚಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಖಾಸಗಿ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು ಎಂದು ಆದೇಶಿಸಿದೆ.

ಇದರಿಂದಾಗಿ ದುಪ್ಪಟ್ಟು ಹಣ ಕೊಟ್ಟು ಇನ್ನಿತರ ವಾಹನ ಬಳಸಬೇಕಾದ ಅನಿವಾರ್ಯತೆ ದೂರಾಗಲಿದೆ. ರಾಜ್ಯ ಸರ್ಕಾರ ಕೂಡ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಅನುಮತಿ ನೀಡಬೇಕಿದೆ.

ದರ್ಶನ್ ಚಂದ್ರ .ಎಂ. ಪಿ., ಮುಕ್ಕಡಹಳ್ಳಿ, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

26 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

33 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

39 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

45 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago