ಓದುಗರ ಪತ್ರ
ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು.
ಕೆಲವು ಕಾಲೇಜು ವಿದ್ಯಾರ್ಥಿಗಳೂ ಇದನ್ನು ಅರೆಕಾಲಿಕ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಇದರಿಂದ ಬಂದ ಸಂಪಾದನೆಯಿಂದ ತಮ್ಮ ಖರ್ಚನ್ನು ಸರಿದೂಗಿಸಿಕೊಳ್ಳುತ್ತಿದ್ದರು. ಸದ್ಯ ಇದಕ್ಕೆ ಪೂರಕವಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ೧೯೮೮ರ ಮೋಟಾರು ವಾಹನ ಕಾಯ್ದೆ ಅನ್ವಯ ಅಗ್ರಿ ಗೇಟರ್ ಮಾರ್ಗಸೂಚಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಖಾಸಗಿ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು ಎಂದು ಆದೇಶಿಸಿದೆ.
ಇದರಿಂದಾಗಿ ದುಪ್ಪಟ್ಟು ಹಣ ಕೊಟ್ಟು ಇನ್ನಿತರ ವಾಹನ ಬಳಸಬೇಕಾದ ಅನಿವಾರ್ಯತೆ ದೂರಾಗಲಿದೆ. ರಾಜ್ಯ ಸರ್ಕಾರ ಕೂಡ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಅನುಮತಿ ನೀಡಬೇಕಿದೆ.
– ದರ್ಶನ್ ಚಂದ್ರ .ಎಂ. ಪಿ., ಮುಕ್ಕಡಹಳ್ಳಿ, ಚಾಮರಾಜನಗರ
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…