Andolana originals

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ಸ್ವಾಗತಾರ್ಹ

ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು.

ಕೆಲವು ಕಾಲೇಜು ವಿದ್ಯಾರ್ಥಿಗಳೂ ಇದನ್ನು ಅರೆಕಾಲಿಕ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಇದರಿಂದ ಬಂದ ಸಂಪಾದನೆಯಿಂದ ತಮ್ಮ ಖರ್ಚನ್ನು ಸರಿದೂಗಿಸಿಕೊಳ್ಳುತ್ತಿದ್ದರು. ಸದ್ಯ ಇದಕ್ಕೆ ಪೂರಕವಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ೧೯೮೮ರ ಮೋಟಾರು ವಾಹನ ಕಾಯ್ದೆ ಅನ್ವಯ ಅಗ್ರಿ ಗೇಟರ್ ಮಾರ್ಗಸೂಚಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಖಾಸಗಿ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು ಎಂದು ಆದೇಶಿಸಿದೆ.

ಇದರಿಂದಾಗಿ ದುಪ್ಪಟ್ಟು ಹಣ ಕೊಟ್ಟು ಇನ್ನಿತರ ವಾಹನ ಬಳಸಬೇಕಾದ ಅನಿವಾರ್ಯತೆ ದೂರಾಗಲಿದೆ. ರಾಜ್ಯ ಸರ್ಕಾರ ಕೂಡ ಪ್ರಯಾಣಿಕರಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಇದಕ್ಕೆ ಅನುಮತಿ ನೀಡಬೇಕಿದೆ.

ದರ್ಶನ್ ಚಂದ್ರ .ಎಂ. ಪಿ., ಮುಕ್ಕಡಹಳ್ಳಿ, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago