ಓದುಗರ ಪತ್ರ
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಒಟ್ಟು ೬೪೩ ಸಚಿವರುಗಳಲ್ಲಿ ಶೇ.೪೭ ಮಂದಿಯ ಮೇಲೆ ಅಂದರೆ ೩೦೨ ಸಚಿವರುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರಲ್ಲಿ ೧೭೬ ಸಚಿವರುಗಳ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ( ಲೈಂಗಿಕ ದೌರ್ಜನ್ಯ ಸೇರಿ) ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ಎಡಿಆರ್) ಇತ್ತೀಚೆಗೆ ನಡೆಸಿದ ಸಮೀಕ್ಷೆ ವರದಿ ತಿಳಿಸಿದೆ.
ಈ ವರದಿಯನ್ನು ನೋಡಿ ಪ್ರಜ್ಞಾವಂತ ನಾಗರಿಕರು ಬೆಚ್ಚಿ ಬೀಳುವಂತಾಗಿದೆ. ದೇಶದಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ಸಚಿವರುಗಳಲ್ಲಿ ಸುಮಾರು ಅರ್ಧದಷ್ಟು ಸಚಿವರು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವುದನ್ನು ಗಮನಿಸಿದರೆ ರಾಜಕಾರಣಿಗಳ ಮೇಲೆ ಸಾರ್ವಜನಿಕರು ವಿಶ್ವಾಸವನ್ನೇ ಕಳೆದುಕೊಳ್ಳುವಂತಾಗಿದೆ, ಇಂತಹ ಸಚಿವರುಗಳಿಂದ ಉತ್ತಮ ಆಡಳಿತವನ್ನು ಸಾರ್ವಜನಿಕರು ನಿರೀಕ್ಷೆ ಮಾಡಲು ಸಾಧ್ಯವೇ ಎನ್ನುವಂತಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…