ಓದುಗರ ಪತ್ರ
ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ಹಲವಾರು ವಕೀಲರ ಸಂಘಗಳು ಈ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿವೆ ಎಂದು ತಿಳಿದು ಬಂದಿದೆ. ಸದ್ಯ ನ್ಯಾಯಾಲಯಗಳು ಬೆಳಿಗ್ಗೆ ೧೧.೦೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಹುತೇಕ ವಕೀಲರು ಇಲ್ಲಿನ ಕಾರ್ಯ ಕಲಾಪಗಳಲ್ಲಿ ಭಾಗಿಯಾಗುವುದರಿಂದ ಸಂಜೆ ನ್ಯಾಯಾಲಯಗಳಲ್ಲಿ ಅವರು ಹಾಜರಾಗಲು ಸಾಧ್ಯವಾಗದೇ ಇರಬಹುದು.
ಅದೇ ರೀತಿ ದೂರದ ಊರುಗಳಿಂದ ಕಕ್ಷಿದಾರರು ಸಂಜೆ ನ್ಯಾಯಾಲಯಕ್ಕೆ ಹಾಜರಾಗಬೇಕಾದರೆ, ಅವರು ನ್ಯಾಯಾಲಯ ಇರುವ ಸ್ಥಳದಲ್ಲಿ ಒಂದು ದಿನ ತಂಗಬೇಕಾಗಬಹುದು. ಅದಕ್ಕಾಗಿ ಅವರು ಅನಗತ್ಯ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕೆಲವು ಬಡ ಕಕ್ಷಿದಾರರಿಗೆ ಇದು ಹೊರೆಯಾಗಿ ಪರಿಣಮಿಸಬಹುದು. ಈಗಾಗಲೇ ಲೋಕ ಅದಾಲತ್ ಮುಂತಾದ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ, ಸಂಜೆ ನ್ಯಾಯಾಲಯ ಕಾರ್ಯಸಾಧುವಲ್ಲ.
ಬೆಳಗಿನ ನ್ಯಾಯಾಲಯಗಳ ಕಾರ್ಯ ಕಲಾಪಗಳಿಗೆ ಹಾಜರಾಗಲು ಸಾಧ್ಯವಾಗದ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅನುಕೂಲವಾಗಬಹುದು ಎಂಬ ಒಂದು ಅಂಶವನ್ನು ಹೊರತು ಪಡಿಸಿದರೆ, ಸಂಜೆ ನ್ಯಾಯಾಲಯಗಳಿಂದ ಹೆಚ್ಚಿನ ರೀತಿಯ ಪ್ರಯೋಜನ ಆಗುವುದಿಲ್ಲ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…