Andolana originals

ಓದುಗರ ಪತ್ರ: ಸಂಜೆ ನ್ಯಾಯಾಲಯಗಳು ಕಾರ್ಯ ಸಾಧುವೇ ?

ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ಹಲವಾರು ವಕೀಲರ ಸಂಘಗಳು ಈ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿವೆ ಎಂದು ತಿಳಿದು ಬಂದಿದೆ. ಸದ್ಯ ನ್ಯಾಯಾಲಯಗಳು ಬೆಳಿಗ್ಗೆ ೧೧.೦೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಹುತೇಕ ವಕೀಲರು ಇಲ್ಲಿನ ಕಾರ್ಯ ಕಲಾಪಗಳಲ್ಲಿ ಭಾಗಿಯಾಗುವುದರಿಂದ ಸಂಜೆ ನ್ಯಾಯಾಲಯಗಳಲ್ಲಿ ಅವರು ಹಾಜರಾಗಲು ಸಾಧ್ಯವಾಗದೇ ಇರಬಹುದು.

ಅದೇ ರೀತಿ ದೂರದ ಊರುಗಳಿಂದ ಕಕ್ಷಿದಾರರು ಸಂಜೆ ನ್ಯಾಯಾಲಯಕ್ಕೆ ಹಾಜರಾಗಬೇಕಾದರೆ, ಅವರು ನ್ಯಾಯಾಲಯ ಇರುವ ಸ್ಥಳದಲ್ಲಿ ಒಂದು ದಿನ ತಂಗಬೇಕಾಗಬಹುದು. ಅದಕ್ಕಾಗಿ ಅವರು ಅನಗತ್ಯ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕೆಲವು ಬಡ ಕಕ್ಷಿದಾರರಿಗೆ ಇದು ಹೊರೆಯಾಗಿ ಪರಿಣಮಿಸಬಹುದು. ಈಗಾಗಲೇ ಲೋಕ ಅದಾಲತ್ ಮುಂತಾದ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ, ಸಂಜೆ ನ್ಯಾಯಾಲಯ ಕಾರ್ಯಸಾಧುವಲ್ಲ.

ಬೆಳಗಿನ ನ್ಯಾಯಾಲಯಗಳ ಕಾರ್ಯ ಕಲಾಪಗಳಿಗೆ ಹಾಜರಾಗಲು ಸಾಧ್ಯವಾಗದ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅನುಕೂಲವಾಗಬಹುದು ಎಂಬ ಒಂದು ಅಂಶವನ್ನು ಹೊರತು ಪಡಿಸಿದರೆ, ಸಂಜೆ ನ್ಯಾಯಾಲಯಗಳಿಂದ ಹೆಚ್ಚಿನ ರೀತಿಯ ಪ್ರಯೋಜನ ಆಗುವುದಿಲ್ಲ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

6 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

17 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

1 hour ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago