Andolana originals

ಓದುಗರ ಪತ್ರ: ಸಂಜೆ ನ್ಯಾಯಾಲಯಗಳು ಕಾರ್ಯ ಸಾಧುವೇ ?

ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ಹಲವಾರು ವಕೀಲರ ಸಂಘಗಳು ಈ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿವೆ ಎಂದು ತಿಳಿದು ಬಂದಿದೆ. ಸದ್ಯ ನ್ಯಾಯಾಲಯಗಳು ಬೆಳಿಗ್ಗೆ ೧೧.೦೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಹುತೇಕ ವಕೀಲರು ಇಲ್ಲಿನ ಕಾರ್ಯ ಕಲಾಪಗಳಲ್ಲಿ ಭಾಗಿಯಾಗುವುದರಿಂದ ಸಂಜೆ ನ್ಯಾಯಾಲಯಗಳಲ್ಲಿ ಅವರು ಹಾಜರಾಗಲು ಸಾಧ್ಯವಾಗದೇ ಇರಬಹುದು.

ಅದೇ ರೀತಿ ದೂರದ ಊರುಗಳಿಂದ ಕಕ್ಷಿದಾರರು ಸಂಜೆ ನ್ಯಾಯಾಲಯಕ್ಕೆ ಹಾಜರಾಗಬೇಕಾದರೆ, ಅವರು ನ್ಯಾಯಾಲಯ ಇರುವ ಸ್ಥಳದಲ್ಲಿ ಒಂದು ದಿನ ತಂಗಬೇಕಾಗಬಹುದು. ಅದಕ್ಕಾಗಿ ಅವರು ಅನಗತ್ಯ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕೆಲವು ಬಡ ಕಕ್ಷಿದಾರರಿಗೆ ಇದು ಹೊರೆಯಾಗಿ ಪರಿಣಮಿಸಬಹುದು. ಈಗಾಗಲೇ ಲೋಕ ಅದಾಲತ್ ಮುಂತಾದ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ, ಸಂಜೆ ನ್ಯಾಯಾಲಯ ಕಾರ್ಯಸಾಧುವಲ್ಲ.

ಬೆಳಗಿನ ನ್ಯಾಯಾಲಯಗಳ ಕಾರ್ಯ ಕಲಾಪಗಳಿಗೆ ಹಾಜರಾಗಲು ಸಾಧ್ಯವಾಗದ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅನುಕೂಲವಾಗಬಹುದು ಎಂಬ ಒಂದು ಅಂಶವನ್ನು ಹೊರತು ಪಡಿಸಿದರೆ, ಸಂಜೆ ನ್ಯಾಯಾಲಯಗಳಿಂದ ಹೆಚ್ಚಿನ ರೀತಿಯ ಪ್ರಯೋಜನ ಆಗುವುದಿಲ್ಲ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

21 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

23 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

26 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

30 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

34 mins ago