Andolana originals

ಓದುಗರ ಪತ್ರ: ಸಂಜೆ ನ್ಯಾಯಾಲಯಗಳು ಕಾರ್ಯ ಸಾಧುವೇ ?

ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ಹಲವಾರು ವಕೀಲರ ಸಂಘಗಳು ಈ ಪ್ರಸ್ತಾವನೆಗೆ ವಿರೋಧ ವ್ಯಕ್ತ ಪಡಿಸಿವೆ ಎಂದು ತಿಳಿದು ಬಂದಿದೆ. ಸದ್ಯ ನ್ಯಾಯಾಲಯಗಳು ಬೆಳಿಗ್ಗೆ ೧೧.೦೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತಿವೆ. ಬಹುತೇಕ ವಕೀಲರು ಇಲ್ಲಿನ ಕಾರ್ಯ ಕಲಾಪಗಳಲ್ಲಿ ಭಾಗಿಯಾಗುವುದರಿಂದ ಸಂಜೆ ನ್ಯಾಯಾಲಯಗಳಲ್ಲಿ ಅವರು ಹಾಜರಾಗಲು ಸಾಧ್ಯವಾಗದೇ ಇರಬಹುದು.

ಅದೇ ರೀತಿ ದೂರದ ಊರುಗಳಿಂದ ಕಕ್ಷಿದಾರರು ಸಂಜೆ ನ್ಯಾಯಾಲಯಕ್ಕೆ ಹಾಜರಾಗಬೇಕಾದರೆ, ಅವರು ನ್ಯಾಯಾಲಯ ಇರುವ ಸ್ಥಳದಲ್ಲಿ ಒಂದು ದಿನ ತಂಗಬೇಕಾಗಬಹುದು. ಅದಕ್ಕಾಗಿ ಅವರು ಅನಗತ್ಯ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಕೆಲವು ಬಡ ಕಕ್ಷಿದಾರರಿಗೆ ಇದು ಹೊರೆಯಾಗಿ ಪರಿಣಮಿಸಬಹುದು. ಈಗಾಗಲೇ ಲೋಕ ಅದಾಲತ್ ಮುಂತಾದ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ, ಸಂಜೆ ನ್ಯಾಯಾಲಯ ಕಾರ್ಯಸಾಧುವಲ್ಲ.

ಬೆಳಗಿನ ನ್ಯಾಯಾಲಯಗಳ ಕಾರ್ಯ ಕಲಾಪಗಳಿಗೆ ಹಾಜರಾಗಲು ಸಾಧ್ಯವಾಗದ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅನುಕೂಲವಾಗಬಹುದು ಎಂಬ ಒಂದು ಅಂಶವನ್ನು ಹೊರತು ಪಡಿಸಿದರೆ, ಸಂಜೆ ನ್ಯಾಯಾಲಯಗಳಿಂದ ಹೆಚ್ಚಿನ ರೀತಿಯ ಪ್ರಯೋಜನ ಆಗುವುದಿಲ್ಲ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

4 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

5 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

5 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

5 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

6 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

7 hours ago