Andolana originals

ಓದುಗರ ಪತ್ರ: ಅಮಾಯಕ ರೈತರ ಜೀವಗಳಿಗೆ ಬೆಲೆ ಇಲ್ಲವೇ?

ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ.

ಬಡಗಲಪುರ ರೈತರೊಬ್ಬರ ಮೇಲೆ ಕೆಲವು ದಿನಗಳ ಹಿಂದೆ ಹುಲಿದಾಳಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಘಟನೆ ಮಾಸುವ ಮೊದಲೇ ಹುಲಿ ದಾಳಿ ಮಾಡಿ ಕೊಂದಿರುವುದು ಆತಂಕ ಮೂಡಿಸುವಂತಿದೆ. ಸರಗೂರು ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಭಯಭೀತರಾಗಿ ಬದುಕನ್ನು ನಡೆಸುತ್ತಿದ್ದಾರೆ. ತಮ್ಮ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾದರೆ ಅವರ ಬದುಕಿನ ಬಂಡಿ ಸಾಗುವುದು ಹೇಗೆ ? ಈ ಭಾಗದ ರೈತರ ಕಷ್ಟಗಳಿಗೆ ಕ್ಷೇತ್ರದ ಶಾಸಕರಾಗಲಿ, ಅರಣ್ಯ ಇಲಾಖೆಯಾಗಲಿ, ಸರ್ಕಾರವಾಗಲಿ ಸ್ಪಂದಿಸದಿರುವುದು ನೋವಿನ ಸಂಗತಿಯಾಗಿದೆ.

ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ಗ್ರಾಮಗಳಲ್ಲಿ ಈ ರೀತಿಯ ಘಟನೆಗಳಾಗದಂತೆ ಎಚ್ಚರಿಕೆ ವಹಿಸಬೇಕು. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟಿರುವ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು.

-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

9 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

10 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

10 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago