ಓದುಗರ ಪತ್ರ
ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ.
ಬಡಗಲಪುರ ರೈತರೊಬ್ಬರ ಮೇಲೆ ಕೆಲವು ದಿನಗಳ ಹಿಂದೆ ಹುಲಿದಾಳಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಘಟನೆ ಮಾಸುವ ಮೊದಲೇ ಹುಲಿ ದಾಳಿ ಮಾಡಿ ಕೊಂದಿರುವುದು ಆತಂಕ ಮೂಡಿಸುವಂತಿದೆ. ಸರಗೂರು ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಭಯಭೀತರಾಗಿ ಬದುಕನ್ನು ನಡೆಸುತ್ತಿದ್ದಾರೆ. ತಮ್ಮ ಜಮೀನುಗಳಿಗೆ ಕೃಷಿ ಚಟುವಟಿಕೆಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾದರೆ ಅವರ ಬದುಕಿನ ಬಂಡಿ ಸಾಗುವುದು ಹೇಗೆ ? ಈ ಭಾಗದ ರೈತರ ಕಷ್ಟಗಳಿಗೆ ಕ್ಷೇತ್ರದ ಶಾಸಕರಾಗಲಿ, ಅರಣ್ಯ ಇಲಾಖೆಯಾಗಲಿ, ಸರ್ಕಾರವಾಗಲಿ ಸ್ಪಂದಿಸದಿರುವುದು ನೋವಿನ ಸಂಗತಿಯಾಗಿದೆ.
ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಂಚಿನ ಗ್ರಾಮಗಳಲ್ಲಿ ಈ ರೀತಿಯ ಘಟನೆಗಳಾಗದಂತೆ ಎಚ್ಚರಿಕೆ ವಹಿಸಬೇಕು. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟಿರುವ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು.
-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…