Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

dgp murder case

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು ವರ್ಷದ ಸಮಗ್ರ ನಿಷೇಧ ಹೇರಿರುವುದು ನಿಜಕ್ಕೂ ಸ್ವಾಗತಾರ್ಹ. ಆದರೆ ಈ ಕಠಿಣ ಕ್ರಮದಿಂದ ಅಡಕೆ ಬೆಳೆಯುವವರು ತೀವ್ರ ಆರ್ಥಿಕ ನಷ್ಟದ ಭೀತಿ ಎದುರಿಸುವಂತಾಗಿದೆ. ಉದಾಹರಣೆಗೆ ಉತ್ತರ ಕನ್ನಡ ಒಂದರ ಸುಮಾರು ೧೦೦ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದ್ದು, ಅಂದಾಜು ೯೦ ಸಾವಿರಕ್ಕೂ ಹೆಚ್ಚು ರೈತರು ಮತ್ತು ಲಕ್ಷಾಂತರ ಉಪ ಉದ್ಯೋಗಿಗಳು ಇದರ ಮೇಲೆಯೇ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸರ್ಕಾರದ ಮುಖ್ಯ ಕರ್ತವ್ಯ ಹೌದಾದರೂ ಬೆಳೆಗಾರರ ಜೀವನಾಧಾರವನ್ನು ರಕ್ಷಿಸುವುದು ಕೂಡ ಅಷ್ಟೇ ತುರ್ತು ಅಗತ್ಯವಾಗಿದೆ. ಆದ್ದರಿಂದ ಸರ್ಕಾರವು ಅಡಕೆಗೆ ಪರ್ಯಾಯ ವೈದ್ಯಕೀಯ ಹಾಗೂ ಕೈಗಾರಿಕಾ ಬಳಕೆಗಳನ್ನು ಕಂಡುಕೊಳ್ಳಲು, ಸಂಶೋಧನೆಗೆ ಪ್ರೋತ್ಸಾಹ ನೀಡಬೇಕು. ಜೊತೆಗೆ ರೈತರಿಗೆ ನ್ಯಾಯಯುತ ಬೆಂಬಲ ಬೆಲೆ ಹಾಗೂ ಸೂಕ್ತ ಆರ್ಥಿಕ ಭದ್ರತೆ ಒದಗಿಸುವುದು ಅತ್ಯಗತ್ಯ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!