ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ತಾಲ್ಲೂಕಿನ ಕೆಲ ಗ್ರಾಮಗಳಿಗೆ ಕಬಿನಿ ನದಿಯಿಂದ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅನೇಕ ಗ್ರಾಮಗಳನ್ನು ಕಡೆಗಣಿಸಲಾಗಿದೆ.
ಇದರಿಂದಾಗಿ ಈ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಸದ್ಯ ಕೂಡ್ಲಾಪುರ ಗ್ರಾಮದಲ್ಲಿ ಜನರು ಮಳೆಯ ನೀರನ್ನು ಆಶ್ರಯಿಸಿಕೊಂಡು ಜೀವನ ಸಾಗಿಸುತ್ತಿದ್ದು, ಕುಡಿಯು ವುದಕ್ಕಾಗಲಿ, ವ್ಯವಸಾಯಕ್ಕಾಗಲಿ ಮಳೆಯ ನೀರನ್ನೇ ನಂಬಿಕೊಂಡಿದ್ದಾರೆ. ಬೇಸಿಗೆಯಲ್ಲಿ ಕೆರೆ-ಕಟ್ಟೆಗಳು ಬತ್ತಿ ಹೋದರಂತೂ ಈ ಭಾಗದಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗುತ್ತದೆ.
ಆಗ ನೀರಿಗಾಗಿ ಜನರು ಅಕ್ಕಪಕ್ಕದ ಗ್ರಾಮಗಳಿಗೆ ಬಿಂದಿಗೆ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ತಾಲ್ಲೂಕಿನ ಅನೇಕ ಗ್ರಾಮಗಳಿಗೆ ಕಬಿನಿ ನದಿಯಿಂದ ಪೈಪ್ಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕೂಡ್ಲಾಪುರ ಗ್ರಾಮಕ್ಕೆ ಮಾತ್ರ ಇನ್ನೂ ಈ ಭಾಗ್ಯ ಲಭಿಸಿಲ್ಲ. ಈ ಗ್ರಾಮಕ್ಕೆ ನೀರನ್ನು ಪೂರೈಕೆ ಮಾಡಲು ಬೋರ್ವೆಲ್ಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಬಿನಿ ನದಿಯಿಂದ ಪೈಪ್ಲೈನ್ ಅಳವಡಿಸಿ ಕೂಡ್ಲಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. -ಕೆ. ಪಿ. ಬಸವಯ್ಯ, ಕೂಡ್ಲಾಪುರ, ನಂಜನಗೂಡು ತಾ.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…