ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಈ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ತಾಲ್ಲೂಕಿನ ಕೆಲ ಗ್ರಾಮಗಳಿಗೆ ಕಬಿನಿ ನದಿಯಿಂದ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅನೇಕ ಗ್ರಾಮಗಳನ್ನು ಕಡೆಗಣಿಸಲಾಗಿದೆ.
ಇದರಿಂದಾಗಿ ಈ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಸದ್ಯ ಕೂಡ್ಲಾಪುರ ಗ್ರಾಮದಲ್ಲಿ ಜನರು ಮಳೆಯ ನೀರನ್ನು ಆಶ್ರಯಿಸಿಕೊಂಡು ಜೀವನ ಸಾಗಿಸುತ್ತಿದ್ದು, ಕುಡಿಯು ವುದಕ್ಕಾಗಲಿ, ವ್ಯವಸಾಯಕ್ಕಾಗಲಿ ಮಳೆಯ ನೀರನ್ನೇ ನಂಬಿಕೊಂಡಿದ್ದಾರೆ. ಬೇಸಿಗೆಯಲ್ಲಿ ಕೆರೆ-ಕಟ್ಟೆಗಳು ಬತ್ತಿ ಹೋದರಂತೂ ಈ ಭಾಗದಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗುತ್ತದೆ.
ಆಗ ನೀರಿಗಾಗಿ ಜನರು ಅಕ್ಕಪಕ್ಕದ ಗ್ರಾಮಗಳಿಗೆ ಬಿಂದಿಗೆ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ತಾಲ್ಲೂಕಿನ ಅನೇಕ ಗ್ರಾಮಗಳಿಗೆ ಕಬಿನಿ ನದಿಯಿಂದ ಪೈಪ್ಲೈನ್ ಅಳವಡಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕೂಡ್ಲಾಪುರ ಗ್ರಾಮಕ್ಕೆ ಮಾತ್ರ ಇನ್ನೂ ಈ ಭಾಗ್ಯ ಲಭಿಸಿಲ್ಲ. ಈ ಗ್ರಾಮಕ್ಕೆ ನೀರನ್ನು ಪೂರೈಕೆ ಮಾಡಲು ಬೋರ್ವೆಲ್ಗಳನ್ನು ಕೊರೆದರೂ ನೀರು ಸಿಗುತ್ತಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಬಿನಿ ನದಿಯಿಂದ ಪೈಪ್ಲೈನ್ ಅಳವಡಿಸಿ ಕೂಡ್ಲಾಪುರ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. -ಕೆ. ಪಿ. ಬಸವಯ್ಯ, ಕೂಡ್ಲಾಪುರ, ನಂಜನಗೂಡು ತಾ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…