ಮೈಸೂರು ಮಹಾ ನಗರಪಾಲಿಕೆಯ ಕಚೇರಿ ಸಂಖ್ಯೆ ೧೭ರ ಜನನ-ಮರಣ ವಿಭಾಗದಲ್ಲಿ ಅರ್ಜಿ ಸಲ್ಲಿಸಲು ಹೋಗುವ ಜನರಿಗೆ ಕುಳಿತುಕೊಳ್ಳಲು ಆಸನಗಳಿಲ್ಲದೆ ಅವರು ಗಂಟೆಗಟ್ಟಲೆ ನಿಂತು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಇಲ್ಲಿಗೆ ಸಾಮಾನ್ಯವಾಗಿ ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಮಹಿಳೆ ಯರು ಆಗಮಿಸು ತ್ತಾರೆ. ಆದರೆ ಇಲ್ಲಿ ಕುಳಿತು ಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದೆ ಇವರೆಲ್ಲರೂ ನಿಂತುಕೊಂಡೇ ಜನನ-ಮರಣ ಪತ್ರಕ್ಕಾಗಿ ಕಾಯಬೇಕಾಗಿದ್ದು, ನಿಂತುಕೊಂಡೇ ಅರ್ಜಿಯನ್ನೂ ಭರ್ತಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಎಲ್ಲದಕ್ಕೂ ನಿರ್ದಿಷ್ಟ ಶುಲ್ಕ ಕಟ್ಟಿಸಿಕೊಳ್ಳುವ ಮಹಾನಗರ ಪಾಲಿಕೆಯವರು ಬರುವ ಸಾರ್ವಜನಿಕರಿಗೆ, ಅದರಲ್ಲಿಯೂ ಹಿರಿಯ ನಾಗರಿಕರಿಗೆ ಸರಿಯಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಲ್ಲವೇ? ಇನ್ನಾದರೂ ಸಂಬಂಧಪಟ್ಟ ಅಽಕಾರಿಗಳು ಈ ಬಗ್ಗೆ ಗಮನ ಹರಿಸಿ ಜನನ-ಮರಣ ಪತ್ರಗಳ ಕಚೇರಿ ಮುಂಭಾಗ ಜನರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಬೇಕಿದೆ.
-ಅಜಯ್ ಶಾಸ್ತ್ರಿ, ಮೈಸೂರು,
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…