Andolana originals

ಓದುಗರ ಪತ್ರ: ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಿ

ಮೈಸೂರು ಮಹಾ ನಗರಪಾಲಿಕೆಯ ಕಚೇರಿ ಸಂಖ್ಯೆ ೧೭ರ ಜನನ-ಮರಣ ವಿಭಾಗದಲ್ಲಿ ಅರ್ಜಿ ಸಲ್ಲಿಸಲು ಹೋಗುವ ಜನರಿಗೆ ಕುಳಿತುಕೊಳ್ಳಲು ಆಸನಗಳಿಲ್ಲದೆ ಅವರು ಗಂಟೆಗಟ್ಟಲೆ ನಿಂತು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಇಲ್ಲಿಗೆ ಸಾಮಾನ್ಯವಾಗಿ ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಮಹಿಳೆ ಯರು ಆಗಮಿಸು ತ್ತಾರೆ. ಆದರೆ ಇಲ್ಲಿ ಕುಳಿತು ಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದೆ ಇವರೆಲ್ಲರೂ ನಿಂತುಕೊಂಡೇ ಜನನ-ಮರಣ ಪತ್ರಕ್ಕಾಗಿ ಕಾಯಬೇಕಾಗಿದ್ದು, ನಿಂತುಕೊಂಡೇ ಅರ್ಜಿಯನ್ನೂ ಭರ್ತಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಎಲ್ಲದಕ್ಕೂ ನಿರ್ದಿಷ್ಟ ಶುಲ್ಕ ಕಟ್ಟಿಸಿಕೊಳ್ಳುವ ಮಹಾನಗರ ಪಾಲಿಕೆಯವರು ಬರುವ ಸಾರ್ವಜನಿಕರಿಗೆ, ಅದರಲ್ಲಿಯೂ ಹಿರಿಯ ನಾಗರಿಕರಿಗೆ ಸರಿಯಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಲ್ಲವೇ? ಇನ್ನಾದರೂ ಸಂಬಂಧಪಟ್ಟ ಅಽಕಾರಿಗಳು ಈ ಬಗ್ಗೆ ಗಮನ ಹರಿಸಿ ಜನನ-ಮರಣ ಪತ್ರಗಳ ಕಚೇರಿ ಮುಂಭಾಗ ಜನರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಬೇಕಿದೆ.

-ಅಜಯ್ ಶಾಸ್ತ್ರಿ, ಮೈಸೂರು,

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago