ಇತ್ತೀಚೆಗೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಸ್ಥಳಾವಕಾಶವೇ ಇಲ್ಲದೆ ಬಾಗಿಲಲ್ಲೇ ಪ್ರಯಾಣಿಸಬೇಕಿದೆ. ನೇತಾಡಿಕೊಂಡು
ಅಲ್ಲದೆ ಕೆಲ ನಿಲ್ದಾಣಗಳಿಗೆ ಬಸ್ಗಳು ಬರುವಷ್ಟರಲ್ಲಿಯೇ ಪ್ರಯಾಣಿ ಕರಿಂದ ತುಂಬಿಕೊಂಡಿರುತ್ತವೆ. ಇದರಿಂದಾಗಿ ಕೆಲ ನಿಲ್ದಾಣಗಳಲ್ಲಿ ಬಸ್ ಗಳು ನಿಲುಗಡೆಯನ್ನೇ ನೀಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ಬಸ್ ಸಿಗದೆ ಅವರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇನ್ನು ಅಶ್ವಮೇಧ ಹಾಗೂ ಕೆಲ ಎಕ್ಸ್ಪ್ರೆಸ್ ಬಸ್ಗಳು ‘ಸ್ಪೂಡೆಂಟ್ ಪಾಸ್ ನಾಟ್ ಅಲೌಡ್’ ಎಂದು ಬೋರ್ಡ್ ಹಾಕಿಕೊಂಡು ಸಂಚರಿಸುತ್ತಿದ್ದು, ಅವು ಖಾಲಿ ಇದ್ದರೂ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿಲ್ಲ.
ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಿ. ಇಲ್ಲವೇ ಅಶ್ವಮೇಧ ಸೇರಿದಂತೆ ಎಲ್ಲ ಬಸ್ಗಳಲ್ಲಿಯೂ ವಿದ್ಯಾರ್ಥಿಗಳ ಪಾಸ್ ಅನುಮತಿಸಲಿ.
-ಎನ್.ಆರ್.ಚೇತನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪುನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…