Categories: Andolana originals

ಓದುಗರ ಪತ್ರ: ಪಾರ್ಕಿಂಗ್ ವ್ಯವಸ್ಥೆ ಮಾಡಿ

ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್‌ ಪಾತ್‌ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

3 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

3 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

3 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

3 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

3 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

3 hours ago