ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್ ಪಾತ್ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…