ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್ ಪಾತ್ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…