Categories: Andolana originals

ಓದುಗರ ಪತ್ರ: ಪಾರ್ಕಿಂಗ್ ವ್ಯವಸ್ಥೆ ಮಾಡಿ

ಮೈಸೂರಿನ ಜೆ.ಪಿ.ನಗರ, ಕುವೆಂಪುನಗರ, ಬೆಮಲ್ ನಗರ, ವಿಜಯನಗರ, ಬಲ್ಲಾಳ್ ವೃತ್ತ, ಸೂರ್ಯ ಬೇಕರಿ ವೃತ್ತ, ಬಸವನಗುಡಿ, ವಿಶ್ವಮಾನವ ಜೋಡಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಈ ರಸ್ತೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆ ಹೆಚ್ಚಿರುತ್ತದೆ. ಆದರೆ ವಾಹನ ಸವಾರರು ರಸ್ತೆ ಬದಿಗಳಲ್ಲಿ ತಮ್ಮ ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿದೆ. ಈ ರಸ್ತೆಗಳಲ್ಲಿ ವಾಣಿಜ್ಯ ಸಂಕೀರ್ಣಗಳು ಹೆಚ್ಚಾಗಿರುವುದರಿಂದ ಜನಸಂದಣಿಯೂ ಹೆಚ್ಚಾಗಿರುತ್ತದೆ. ಇಂತಹ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತಿರುವುದು ಪಾದಚಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಅಲ್ಲದೆ ಫುಟ್‌ ಪಾತ್‌ಗಳನ್ನೂ ಕೆಲ ಅಂಗಡಿಯವರು ಆಕ್ರಮಿಸಿಕೊಂಡಿದ್ದು, ಪಾದಾಚಾರಿಗಳು ವಿಧಿಯಿಲ್ಲದೆ ರಸ್ತೆಯಲ್ಲಿಯೇ ಸಂಚರಿಸಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

44 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

5 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

21 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

22 hours ago