Andolana originals

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ…’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ ಕುಂದುಕೊರತೆ ಸಭೆಯಲ್ಲಿ ಹೀನ ಭಾಷೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಪ ಲೋಕಾಯುಕ್ತರು ಕರ್ನಾಟಕದಲ್ಲಿ ಶೇ.೬೩ ಭ್ರಷ್ಟಾಚಾರವಿದೆ. ಭ್ರಷ್ಟಾಚಾರದಲ್ಲಿ ರಾಜ್ಯ ೫ನೇ ಸ್ಥಾನದಲ್ಲಿದೆ ಎಂದು ಹೇಳಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಶೇ.೪೦ ಕಮಿಷನ್ ಎಂದು ಬೊಬ್ಬೆ ಹಾಕಿ, ಅದನ್ನೇ ಮೆಟ್ಟಿಲಾಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಶೇ೬೩ ರಷ್ಟನ್ನೂ ದಾಟಿರುವುದು ಜಗಜ್ಜಾಹೀರು. ವರ್ಗಾವಣೆ ದಂಧೆಯಲ್ಲಿ ಹಿಂದಿನ ಸರ್ಕಾರಗಳ ಅವಧಿಯ ಭ್ರಷ್ಟಾಚಾರವನ್ನೂ ಮೀರಿಸಿರುವುದು ಸುಳ್ಳೇನಲ್ಲ. ೯೦ರ ದಶಕದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕದ ಎಂ.ಬಿ.ಕರಕಣ್ಣನವರ್ ಎಂಬವರು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿದ್ದರು. ಪ್ರಾಮಾಣಿಕರಾದ ಅವರು ನೌಕರ ವರ್ಗದಲ್ಲಿ ಶಿಸ್ತು, ಕರ್ತವ್ಯ ನಿಷ್ಠೆಗೆ ಕಾರಣರಾಗಿದ್ದರು. ಚಾಮರಾಜ ಜೋಡಿ ರಸ್ತೆಯ ಆರೋಗ್ಯ ಕೇಂದ್ರದ ಒಂದು ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಇದನ್ನು ಸಹಿಸದ ಪಟ್ಟಭದ್ರ ಅಧಿಕಾರಿಗಳ ಒಂದು ವರ್ಗ ಒಂದೆರಡು ವರ್ಷಗಳಲ್ಲಿಯೇ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿಸಿತು. ಇಂತಹ ವ್ಯವಸ್ಥೆಯಡಿ ಯಾರೋ ಒಬ್ಬ ನೌಕರ, ಅಧಿಕಾರಿಯನ್ನು ದೂಷಿಸಿದರೆ ಪ್ರಯೋಜನವೇನು? ಅದು ಸರ್ಕಾರದ ಮಟ್ಟದಲ್ಲೇ ಆಗಬೇಕು, ಅಂತಹ ಕಾಲಕ್ಕಾಗಿ ಜನ ಎದುರು ನೋಡುತ್ತಿದ್ದಾರೆ.ಯಥಾ ರಾಜ.. ತಥಾ ಅಧಿಕಾರಿ…

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

12 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

25 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

52 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago