Andolana originals

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ…’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ ಕುಂದುಕೊರತೆ ಸಭೆಯಲ್ಲಿ ಹೀನ ಭಾಷೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಪ ಲೋಕಾಯುಕ್ತರು ಕರ್ನಾಟಕದಲ್ಲಿ ಶೇ.೬೩ ಭ್ರಷ್ಟಾಚಾರವಿದೆ. ಭ್ರಷ್ಟಾಚಾರದಲ್ಲಿ ರಾಜ್ಯ ೫ನೇ ಸ್ಥಾನದಲ್ಲಿದೆ ಎಂದು ಹೇಳಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಶೇ.೪೦ ಕಮಿಷನ್ ಎಂದು ಬೊಬ್ಬೆ ಹಾಕಿ, ಅದನ್ನೇ ಮೆಟ್ಟಿಲಾಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಶೇ೬೩ ರಷ್ಟನ್ನೂ ದಾಟಿರುವುದು ಜಗಜ್ಜಾಹೀರು. ವರ್ಗಾವಣೆ ದಂಧೆಯಲ್ಲಿ ಹಿಂದಿನ ಸರ್ಕಾರಗಳ ಅವಧಿಯ ಭ್ರಷ್ಟಾಚಾರವನ್ನೂ ಮೀರಿಸಿರುವುದು ಸುಳ್ಳೇನಲ್ಲ. ೯೦ರ ದಶಕದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕದ ಎಂ.ಬಿ.ಕರಕಣ್ಣನವರ್ ಎಂಬವರು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿದ್ದರು. ಪ್ರಾಮಾಣಿಕರಾದ ಅವರು ನೌಕರ ವರ್ಗದಲ್ಲಿ ಶಿಸ್ತು, ಕರ್ತವ್ಯ ನಿಷ್ಠೆಗೆ ಕಾರಣರಾಗಿದ್ದರು. ಚಾಮರಾಜ ಜೋಡಿ ರಸ್ತೆಯ ಆರೋಗ್ಯ ಕೇಂದ್ರದ ಒಂದು ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಇದನ್ನು ಸಹಿಸದ ಪಟ್ಟಭದ್ರ ಅಧಿಕಾರಿಗಳ ಒಂದು ವರ್ಗ ಒಂದೆರಡು ವರ್ಷಗಳಲ್ಲಿಯೇ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿಸಿತು. ಇಂತಹ ವ್ಯವಸ್ಥೆಯಡಿ ಯಾರೋ ಒಬ್ಬ ನೌಕರ, ಅಧಿಕಾರಿಯನ್ನು ದೂಷಿಸಿದರೆ ಪ್ರಯೋಜನವೇನು? ಅದು ಸರ್ಕಾರದ ಮಟ್ಟದಲ್ಲೇ ಆಗಬೇಕು, ಅಂತಹ ಕಾಲಕ್ಕಾಗಿ ಜನ ಎದುರು ನೋಡುತ್ತಿದ್ದಾರೆ.ಯಥಾ ರಾಜ.. ತಥಾ ಅಧಿಕಾರಿ…

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

4 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

4 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

5 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

5 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

14 hours ago