Andolana originals

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ…’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ ಕುಂದುಕೊರತೆ ಸಭೆಯಲ್ಲಿ ಹೀನ ಭಾಷೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಪ ಲೋಕಾಯುಕ್ತರು ಕರ್ನಾಟಕದಲ್ಲಿ ಶೇ.೬೩ ಭ್ರಷ್ಟಾಚಾರವಿದೆ. ಭ್ರಷ್ಟಾಚಾರದಲ್ಲಿ ರಾಜ್ಯ ೫ನೇ ಸ್ಥಾನದಲ್ಲಿದೆ ಎಂದು ಹೇಳಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಶೇ.೪೦ ಕಮಿಷನ್ ಎಂದು ಬೊಬ್ಬೆ ಹಾಕಿ, ಅದನ್ನೇ ಮೆಟ್ಟಿಲಾಗಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಶೇ೬೩ ರಷ್ಟನ್ನೂ ದಾಟಿರುವುದು ಜಗಜ್ಜಾಹೀರು. ವರ್ಗಾವಣೆ ದಂಧೆಯಲ್ಲಿ ಹಿಂದಿನ ಸರ್ಕಾರಗಳ ಅವಧಿಯ ಭ್ರಷ್ಟಾಚಾರವನ್ನೂ ಮೀರಿಸಿರುವುದು ಸುಳ್ಳೇನಲ್ಲ. ೯೦ರ ದಶಕದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕದ ಎಂ.ಬಿ.ಕರಕಣ್ಣನವರ್ ಎಂಬವರು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿದ್ದರು. ಪ್ರಾಮಾಣಿಕರಾದ ಅವರು ನೌಕರ ವರ್ಗದಲ್ಲಿ ಶಿಸ್ತು, ಕರ್ತವ್ಯ ನಿಷ್ಠೆಗೆ ಕಾರಣರಾಗಿದ್ದರು. ಚಾಮರಾಜ ಜೋಡಿ ರಸ್ತೆಯ ಆರೋಗ್ಯ ಕೇಂದ್ರದ ಒಂದು ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಇದನ್ನು ಸಹಿಸದ ಪಟ್ಟಭದ್ರ ಅಧಿಕಾರಿಗಳ ಒಂದು ವರ್ಗ ಒಂದೆರಡು ವರ್ಷಗಳಲ್ಲಿಯೇ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿಸಿತು. ಇಂತಹ ವ್ಯವಸ್ಥೆಯಡಿ ಯಾರೋ ಒಬ್ಬ ನೌಕರ, ಅಧಿಕಾರಿಯನ್ನು ದೂಷಿಸಿದರೆ ಪ್ರಯೋಜನವೇನು? ಅದು ಸರ್ಕಾರದ ಮಟ್ಟದಲ್ಲೇ ಆಗಬೇಕು, ಅಂತಹ ಕಾಲಕ್ಕಾಗಿ ಜನ ಎದುರು ನೋಡುತ್ತಿದ್ದಾರೆ.ಯಥಾ ರಾಜ.. ತಥಾ ಅಧಿಕಾರಿ…

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

9 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

10 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

11 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

16 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

16 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

17 hours ago