Andolana originals

ಓದುಗರ ಪತ್ರ: ಬೂದುಗುಂಬಳ ಕಾಯಿಯನ್ನು ಬಿಸಾಡುವುದೇಕೆ?

ರಾಜ್ಯಾದ್ಯಂತ ವಿಜೃಂಭಣೆಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಆಚರಿಸಲಾಗಿದೆ. ಆಯುಧ ಪೂಜೆ ಅಂಗವಾಗಿ ಬಾಳೆಹಣ್ಣು, ತೆಂಗಿನಕಾಯಿ ಹಾಗೂ ಬೂದುಗುಂಬಳ ಕಾಯಿಯನ್ನು ಒಡೆದು ಪೂಜೆ ಮಾಡುವುದು ಸಂಪ್ರದಾಯ.
ಬಳಿಕ ತೆಂಗಿನ ಕಾಯಿ ಹಾಗೂ ಬಾಳೆಹಣ್ಣನ್ನು ತೆಗೆದುಕೊಂಡು ಹೋಗುವ ಜನರು ಬೂದುಗುಂಬಳ ಕಾಯಿಯನ್ನು ಮಾತ್ರ ಒಡೆದ ಸ್ಥಳದಲ್ಲಿಯೇ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ವಾಹನಗಳು, ಯಂತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಕೋಳಿ ಬಲಿ ನೀಡುತ್ತಾರೆ. ಬಳಿಕ ಅದನ್ನು ಅಡುಗೆ ಮಾಡಿ ತಿನ್ನುತ್ತಾರೆ. ಆದರೆ ಬೂದುಗುಂಬಳಕಾಯಿ ಒಳ್ಳೆಯ ಆಹಾರ ಪದಾರ್ಥವಾಗಿದ್ದರೂ ಅದನ್ನು ಯಾರೂ ಬಳಸುವುದಿಲ್ಲ. ಬೂದುಗುಂಬಳದಲ್ಲಿಯೂ ಬಗೆ ಬಗೆಯ ತಿನಿಸುಗಳನ್ನು ತಯಾರಿಸಬಹುದು.
ಮಜ್ಜಿಗೆ ಹುಳಿ, ಹಲ್ವಾ, ಜ್ಯೂಸ್ ಮಾಡಿ ಬಳಸಿದರೆ ಈ ಆಹಾರ ಪದಾರ್ಥವೂ ವ್ಯರ್ಥವಾಗುವುದಿಲ್ಲ, ಜತೆಗೆ ಆರೋಗ್ಯಕ್ಕೂ ಒಳ್ಳೆಯದು. ಈ ಬಗ್ಗೆ ಈಗಾಗಲೇ ನಿವೃತ್ತ ಪ್ರಾಂಶುಪಾಲ ಪ್ರೊ.ಎಚ್.ಆರ್.ಸಿದ್ದೇಗೌಡ ಮತ್ತು ಡೀಡ್ ಸಂಸ್ಥೆಯ ಡಾ.ಎಸ್.ಶ್ರೀಕಾಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಒಡೆದ ಬೂದುಗುಂಬಳ ಕಾಯಿಗೆ ರಾಸಾಯನಿಕಯುಕ್ತ ಕುಂಕುಮವನ್ನು ಹಾಕಿ ಬೀದಿ ಬೀದಿಯಲ್ಲಿ ಬೀಸಾಡುವುದರಿಂದ ಅವುಗಳನ್ನು ಸೇವಿಸುವ ಚಾನುವಾರುಗಳಿಗೂ ಆರೋಗ್ಯದ ಸಮಸ್ಯೆ ಕಾಡಬಹುದು. ಆದ್ದರಿಂದ ಪೂಜೆ ಮುಗಿದ ನಂತರ ಅದನ್ನು ನಾವು ಆಹಾರವಾಗಿ ಬಳಸಬೇಕು ಎಂದು ಅವರು ಮನವಿ ಮಾಡಿರುವುದರಲ್ಲಿ ಅರ್ಥವಿಲ್ಲದಿಲ್ಲ.
ಶ್ರೀಕಾಂತ್‌, ಹುಣಸೂರು

 

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

16 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

5 hours ago