ಓದುಗರ ಪತ್ರ
ರಾಜ್ಯಾದ್ಯಂತ ವಿಜೃಂಭಣೆಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಆಚರಿಸಲಾಗಿದೆ. ಆಯುಧ ಪೂಜೆ ಅಂಗವಾಗಿ ಬಾಳೆಹಣ್ಣು, ತೆಂಗಿನಕಾಯಿ ಹಾಗೂ ಬೂದುಗುಂಬಳ ಕಾಯಿಯನ್ನು ಒಡೆದು ಪೂಜೆ ಮಾಡುವುದು ಸಂಪ್ರದಾಯ.
ಬಳಿಕ ತೆಂಗಿನ ಕಾಯಿ ಹಾಗೂ ಬಾಳೆಹಣ್ಣನ್ನು ತೆಗೆದುಕೊಂಡು ಹೋಗುವ ಜನರು ಬೂದುಗುಂಬಳ ಕಾಯಿಯನ್ನು ಮಾತ್ರ ಒಡೆದ ಸ್ಥಳದಲ್ಲಿಯೇ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ವಾಹನಗಳು, ಯಂತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಕೋಳಿ ಬಲಿ ನೀಡುತ್ತಾರೆ. ಬಳಿಕ ಅದನ್ನು ಅಡುಗೆ ಮಾಡಿ ತಿನ್ನುತ್ತಾರೆ. ಆದರೆ ಬೂದುಗುಂಬಳಕಾಯಿ ಒಳ್ಳೆಯ ಆಹಾರ ಪದಾರ್ಥವಾಗಿದ್ದರೂ ಅದನ್ನು ಯಾರೂ ಬಳಸುವುದಿಲ್ಲ. ಬೂದುಗುಂಬಳದಲ್ಲಿಯೂ ಬಗೆ ಬಗೆಯ ತಿನಿಸುಗಳನ್ನು ತಯಾರಿಸಬಹುದು.
ಮಜ್ಜಿಗೆ ಹುಳಿ, ಹಲ್ವಾ, ಜ್ಯೂಸ್ ಮಾಡಿ ಬಳಸಿದರೆ ಈ ಆಹಾರ ಪದಾರ್ಥವೂ ವ್ಯರ್ಥವಾಗುವುದಿಲ್ಲ, ಜತೆಗೆ ಆರೋಗ್ಯಕ್ಕೂ ಒಳ್ಳೆಯದು. ಈ ಬಗ್ಗೆ ಈಗಾಗಲೇ ನಿವೃತ್ತ ಪ್ರಾಂಶುಪಾಲ ಪ್ರೊ.ಎಚ್.ಆರ್.ಸಿದ್ದೇಗೌಡ ಮತ್ತು ಡೀಡ್ ಸಂಸ್ಥೆಯ ಡಾ.ಎಸ್.ಶ್ರೀಕಾಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಒಡೆದ ಬೂದುಗುಂಬಳ ಕಾಯಿಗೆ ರಾಸಾಯನಿಕಯುಕ್ತ ಕುಂಕುಮವನ್ನು ಹಾಕಿ ಬೀದಿ ಬೀದಿಯಲ್ಲಿ ಬೀಸಾಡುವುದರಿಂದ ಅವುಗಳನ್ನು ಸೇವಿಸುವ ಚಾನುವಾರುಗಳಿಗೂ ಆರೋಗ್ಯದ ಸಮಸ್ಯೆ ಕಾಡಬಹುದು. ಆದ್ದರಿಂದ ಪೂಜೆ ಮುಗಿದ ನಂತರ ಅದನ್ನು ನಾವು ಆಹಾರವಾಗಿ ಬಳಸಬೇಕು ಎಂದು ಅವರು ಮನವಿ ಮಾಡಿರುವುದರಲ್ಲಿ ಅರ್ಥವಿಲ್ಲದಿಲ್ಲ.
ಶ್ರೀಕಾಂತ್, ಹುಣಸೂರು
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…