Andolana originals

ಓದುಗರ ಪತ್ರ: ಬೂದುಗುಂಬಳ ಕಾಯಿಯನ್ನು ಬಿಸಾಡುವುದೇಕೆ?

ರಾಜ್ಯಾದ್ಯಂತ ವಿಜೃಂಭಣೆಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಆಚರಿಸಲಾಗಿದೆ. ಆಯುಧ ಪೂಜೆ ಅಂಗವಾಗಿ ಬಾಳೆಹಣ್ಣು, ತೆಂಗಿನಕಾಯಿ ಹಾಗೂ ಬೂದುಗುಂಬಳ ಕಾಯಿಯನ್ನು ಒಡೆದು ಪೂಜೆ ಮಾಡುವುದು ಸಂಪ್ರದಾಯ.
ಬಳಿಕ ತೆಂಗಿನ ಕಾಯಿ ಹಾಗೂ ಬಾಳೆಹಣ್ಣನ್ನು ತೆಗೆದುಕೊಂಡು ಹೋಗುವ ಜನರು ಬೂದುಗುಂಬಳ ಕಾಯಿಯನ್ನು ಮಾತ್ರ ಒಡೆದ ಸ್ಥಳದಲ್ಲಿಯೇ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ವಾಹನಗಳು, ಯಂತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಕೋಳಿ ಬಲಿ ನೀಡುತ್ತಾರೆ. ಬಳಿಕ ಅದನ್ನು ಅಡುಗೆ ಮಾಡಿ ತಿನ್ನುತ್ತಾರೆ. ಆದರೆ ಬೂದುಗುಂಬಳಕಾಯಿ ಒಳ್ಳೆಯ ಆಹಾರ ಪದಾರ್ಥವಾಗಿದ್ದರೂ ಅದನ್ನು ಯಾರೂ ಬಳಸುವುದಿಲ್ಲ. ಬೂದುಗುಂಬಳದಲ್ಲಿಯೂ ಬಗೆ ಬಗೆಯ ತಿನಿಸುಗಳನ್ನು ತಯಾರಿಸಬಹುದು.
ಮಜ್ಜಿಗೆ ಹುಳಿ, ಹಲ್ವಾ, ಜ್ಯೂಸ್ ಮಾಡಿ ಬಳಸಿದರೆ ಈ ಆಹಾರ ಪದಾರ್ಥವೂ ವ್ಯರ್ಥವಾಗುವುದಿಲ್ಲ, ಜತೆಗೆ ಆರೋಗ್ಯಕ್ಕೂ ಒಳ್ಳೆಯದು. ಈ ಬಗ್ಗೆ ಈಗಾಗಲೇ ನಿವೃತ್ತ ಪ್ರಾಂಶುಪಾಲ ಪ್ರೊ.ಎಚ್.ಆರ್.ಸಿದ್ದೇಗೌಡ ಮತ್ತು ಡೀಡ್ ಸಂಸ್ಥೆಯ ಡಾ.ಎಸ್.ಶ್ರೀಕಾಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಒಡೆದ ಬೂದುಗುಂಬಳ ಕಾಯಿಗೆ ರಾಸಾಯನಿಕಯುಕ್ತ ಕುಂಕುಮವನ್ನು ಹಾಕಿ ಬೀದಿ ಬೀದಿಯಲ್ಲಿ ಬೀಸಾಡುವುದರಿಂದ ಅವುಗಳನ್ನು ಸೇವಿಸುವ ಚಾನುವಾರುಗಳಿಗೂ ಆರೋಗ್ಯದ ಸಮಸ್ಯೆ ಕಾಡಬಹುದು. ಆದ್ದರಿಂದ ಪೂಜೆ ಮುಗಿದ ನಂತರ ಅದನ್ನು ನಾವು ಆಹಾರವಾಗಿ ಬಳಸಬೇಕು ಎಂದು ಅವರು ಮನವಿ ಮಾಡಿರುವುದರಲ್ಲಿ ಅರ್ಥವಿಲ್ಲದಿಲ್ಲ.
ಶ್ರೀಕಾಂತ್‌, ಹುಣಸೂರು

 

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

13 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

13 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

13 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

15 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

15 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

18 hours ago