Andolana originals

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು ತುಳಿದುಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ಇರುವ ಒಳಚರಂಡಿ ಪೈಪ್ ಲೈನ್ ಅರ್ಧ ಅಡಿ ವ್ಯಾಸವುಳ್ಳದ್ದಾಗಿರುವುದರಿಂದ ಯುಜಿಡಿ ನೀರು ಸರಾಗವಾಗಿ ಹರಿಯದೇ ರಸ್ತೆಯ ಮೇಲೆ ಹರಿಯುತ್ತಿದೆ. ಹಳೆಯ ಪೈಪ್ ಲೈನ್ ಬದಲಿಸಿ ಒಂದು ಅಡಿ ವ್ಯಾಸವುಳ್ಳ ಪೈಪ್ ಲೈನ್‌ಅನ್ನು ಅಳವಡಿಸುವುದು ಅಗತ್ಯವಾಗಿದೆ. ವೀಣೆ ಶಾಮಣ್ಣ ರಸ್ತೆಗೆ ಸಿಮೆಂಟ್ ಟೈಲ್ಸ್ ಅಳವಡಿಸಿರುವುದರಿಂದ ನೀರು ಇಂಗದೇ ಕೆರೆಯಂತಾಗುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ವೀಣೆ ಶಾಮಣ್ಣ ರಸ್ತೆಗೆ ಅಳವಡಿಸಿರುವ ಸಿಮೆಂಟ್ ಟೈಲ್ಸ್‌ಗಳನ್ನು ತೆರವುಗೊಳಿಸಿ ಡಾಂಬರ್ ರಸ್ತೆಯನ್ನು ನಿರ್ಮಿಸಲು ಶಾಸಕರು ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

 -ಎಲ್.ಎನ್.ಪ್ರಕಾಶ್, ವೀಣೆ ಶಾಮಣ್ಣ ರಸ್ತೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

24 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

41 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

1 hour ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

2 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago