ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು ತುಳಿದುಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಪ್ರಸ್ತುತ ಇರುವ ಒಳಚರಂಡಿ ಪೈಪ್ ಲೈನ್ ಅರ್ಧ ಅಡಿ ವ್ಯಾಸವುಳ್ಳದ್ದಾಗಿರುವುದರಿಂದ ಯುಜಿಡಿ ನೀರು ಸರಾಗವಾಗಿ ಹರಿಯದೇ ರಸ್ತೆಯ ಮೇಲೆ ಹರಿಯುತ್ತಿದೆ. ಹಳೆಯ ಪೈಪ್ ಲೈನ್ ಬದಲಿಸಿ ಒಂದು ಅಡಿ ವ್ಯಾಸವುಳ್ಳ ಪೈಪ್ ಲೈನ್ಅನ್ನು ಅಳವಡಿಸುವುದು ಅಗತ್ಯವಾಗಿದೆ. ವೀಣೆ ಶಾಮಣ್ಣ ರಸ್ತೆಗೆ ಸಿಮೆಂಟ್ ಟೈಲ್ಸ್ ಅಳವಡಿಸಿರುವುದರಿಂದ ನೀರು ಇಂಗದೇ ಕೆರೆಯಂತಾಗುತ್ತಿದ್ದು, ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ವೀಣೆ ಶಾಮಣ್ಣ ರಸ್ತೆಗೆ ಅಳವಡಿಸಿರುವ ಸಿಮೆಂಟ್ ಟೈಲ್ಸ್ಗಳನ್ನು ತೆರವುಗೊಳಿಸಿ ಡಾಂಬರ್ ರಸ್ತೆಯನ್ನು ನಿರ್ಮಿಸಲು ಶಾಸಕರು ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ಎಲ್.ಎನ್.ಪ್ರಕಾಶ್, ವೀಣೆ ಶಾಮಣ್ಣ ರಸ್ತೆ, ಮೈಸೂರು
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…