ಓದುಗರ ಪತ್ರ
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಶೇಷಚೇತನರ ಪಿಂಚಣಿ ಸೇರಿದಂತೆ ಎಲ್ಲ ಪ್ರಮಾಣಪತ್ರಗಳಿಗೂ ಅರ್ಜಿ ಸಲ್ಲಿಸಲಾಗುತ್ತದೆ. ಶಾಲಾ ಕಾಲೇಜುಗಳ ದಾಖಲಾತಿ ಸಮಯವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಆದರೆ ನೆಮ್ಮದಿ ಕೇಂದ್ರದಲ್ಲಿ ಸಾಕಷ್ಟು ಸಿಬ್ಬಂದಿ ಹಾಗೂ ಕಂಪ್ಯೂಟರ್ಗಳು ಇಲ್ಲದೇ ಪ್ರಮಾಣ ಪತ್ರಗಳನ್ನು ಸಕಾಲಕ್ಕೆ ನೀಡುವುದು ವಿಳಂಬವಾಗುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರು ನೆಮ್ಮದಿ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಽಕಾರಿಗಳು ಕೂಡಲೇ ನೆಮ್ಮದಿ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವುದರೊಂದಿಗೆ ಅಗತ್ಯವಿರುವಷ್ಟು ಕಂಪ್ಯೂಟರ್ಗಳನ್ನು ಒದಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…