Andolana originals

ಓದುಗರ ಪತ್ರ: ಪಾದಚಾರಿ ರಸ್ತೆ ಅತಿಕ್ರಮಣ ತಪ್ಪಿಸಿ

ಮೈಸೂರಿನ ಸಯ್ಯಾಜಿರಾವ್ ರಸ್ತೆ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪ (ಮಹಾರಾಜ ಕಾಂಪ್ಲೆಕ್ಸ್ ಎದುರು) ರಸ್ತೆಬದಿ ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ದಿನನಿತ್ಯ ಬಹಳ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಇವರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗೆ ಇವರು ಈ ಜಾಗವನ್ನು ಆಕ್ರಮಿಸಿಕೊಂಡರೆ ಸಾರ್ವಜನಿಕರು ನಡೆದಾಡುವುದಾದರೂ ಹೇಗೆ? ಗ್ರಾಮಾಂತರ ಬಸ್ ನಿಲ್ದಾಣ ದಿನದ ೨೪ ಗಂಟೆಗಳೂ ಜನರಿಂದ ತುಂಬಿರುತ್ತದೆ. ರಸ್ತೆ ಬದಿ ವ್ಯಾಪಾರಸ್ಥರ ಉಪಟಳದಿಂದ ವಯೋವೃದ್ಧರಿಗೆ, ಮಕ್ಕಳಿಗೆ ಇಲ್ಲಿ ಸಂಚರಿಸಲು ತೊಂದರೆಯಾಗುತ್ತಿದೆ. ಅದೂ ಅಲ್ಲದೇ ಇವರ ಕಿರಿಕಿರಿಯಿಂದ ಅಲ್ಲಿರುವ ಅಂಗಡಿ ಮಾಲೀಕರಿಗೆ ಸರಿಯಾಗಿ ವ್ಯಾಪಾರ ಆಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ. ಪಾಲಿಕೆಯವರು ಇವರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಿ, ಅಲ್ಲಿ ವ್ಯಾಪಾರ ನಡೆಸಲು ಅನುವು ಮಾಡಿಕೊಟ್ಟು, ಇವರನ್ನು ಆದಷ್ಟು ಬೇಗ ತೆರವುಗೊಳಿಸಿ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಸಹಕರಿಸಬೇಕಾಗಿದೆ.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ…

5 mins ago

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ…

32 mins ago

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

2 hours ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

2 hours ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

2 hours ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…

3 hours ago