ಮೈಸೂರಿನ ಸಯ್ಯಾಜಿರಾವ್ ರಸ್ತೆ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪ (ಮಹಾರಾಜ ಕಾಂಪ್ಲೆಕ್ಸ್ ಎದುರು) ರಸ್ತೆಬದಿ ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ದಿನನಿತ್ಯ ಬಹಳ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಇವರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗೆ ಇವರು ಈ ಜಾಗವನ್ನು ಆಕ್ರಮಿಸಿಕೊಂಡರೆ ಸಾರ್ವಜನಿಕರು ನಡೆದಾಡುವುದಾದರೂ ಹೇಗೆ? ಗ್ರಾಮಾಂತರ ಬಸ್ ನಿಲ್ದಾಣ ದಿನದ ೨೪ ಗಂಟೆಗಳೂ ಜನರಿಂದ ತುಂಬಿರುತ್ತದೆ. ರಸ್ತೆ ಬದಿ ವ್ಯಾಪಾರಸ್ಥರ ಉಪಟಳದಿಂದ ವಯೋವೃದ್ಧರಿಗೆ, ಮಕ್ಕಳಿಗೆ ಇಲ್ಲಿ ಸಂಚರಿಸಲು ತೊಂದರೆಯಾಗುತ್ತಿದೆ. ಅದೂ ಅಲ್ಲದೇ ಇವರ ಕಿರಿಕಿರಿಯಿಂದ ಅಲ್ಲಿರುವ ಅಂಗಡಿ ಮಾಲೀಕರಿಗೆ ಸರಿಯಾಗಿ ವ್ಯಾಪಾರ ಆಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ. ಪಾಲಿಕೆಯವರು ಇವರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಿ, ಅಲ್ಲಿ ವ್ಯಾಪಾರ ನಡೆಸಲು ಅನುವು ಮಾಡಿಕೊಟ್ಟು, ಇವರನ್ನು ಆದಷ್ಟು ಬೇಗ ತೆರವುಗೊಳಿಸಿ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಸಹಕರಿಸಬೇಕಾಗಿದೆ.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…