Andolana originals

ಓದುಗರ ಪತ್ರ: ಪಾದಚಾರಿ ರಸ್ತೆ ಅತಿಕ್ರಮಣ ತಪ್ಪಿಸಿ

ಮೈಸೂರಿನ ಸಯ್ಯಾಜಿರಾವ್ ರಸ್ತೆ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪ (ಮಹಾರಾಜ ಕಾಂಪ್ಲೆಕ್ಸ್ ಎದುರು) ರಸ್ತೆಬದಿ ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ದಿನನಿತ್ಯ ಬಹಳ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಇವರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗೆ ಇವರು ಈ ಜಾಗವನ್ನು ಆಕ್ರಮಿಸಿಕೊಂಡರೆ ಸಾರ್ವಜನಿಕರು ನಡೆದಾಡುವುದಾದರೂ ಹೇಗೆ? ಗ್ರಾಮಾಂತರ ಬಸ್ ನಿಲ್ದಾಣ ದಿನದ ೨೪ ಗಂಟೆಗಳೂ ಜನರಿಂದ ತುಂಬಿರುತ್ತದೆ. ರಸ್ತೆ ಬದಿ ವ್ಯಾಪಾರಸ್ಥರ ಉಪಟಳದಿಂದ ವಯೋವೃದ್ಧರಿಗೆ, ಮಕ್ಕಳಿಗೆ ಇಲ್ಲಿ ಸಂಚರಿಸಲು ತೊಂದರೆಯಾಗುತ್ತಿದೆ. ಅದೂ ಅಲ್ಲದೇ ಇವರ ಕಿರಿಕಿರಿಯಿಂದ ಅಲ್ಲಿರುವ ಅಂಗಡಿ ಮಾಲೀಕರಿಗೆ ಸರಿಯಾಗಿ ವ್ಯಾಪಾರ ಆಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ. ಪಾಲಿಕೆಯವರು ಇವರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಿ, ಅಲ್ಲಿ ವ್ಯಾಪಾರ ನಡೆಸಲು ಅನುವು ಮಾಡಿಕೊಟ್ಟು, ಇವರನ್ನು ಆದಷ್ಟು ಬೇಗ ತೆರವುಗೊಳಿಸಿ ಪಾದಚಾರಿಗಳು ಸುಗಮವಾಗಿ ಸಂಚರಿಸಲು ಸಹಕರಿಸಬೇಕಾಗಿದೆ.

-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 mins ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 hours ago