Andolana originals

ಓದುಗರ ಪತ್ರ: ಕುವೆಂಪು ನಗರದಲ್ಲಿ ಕುಡುಕರ ಹಾವಳಿ ತಪ್ಪಿಸಿ

ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್‌ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ ಭಾಗದಲ್ಲಿ ಓಡಾಡುವ ಸಾರ್ವಜನಿಕರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಈ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದಿರುವುದು ಕುಡುಕರಿಗೆ ವರದಾನವಾಗಿದೆ. ಕುವೆಂಪು ನಗರದ ಐ ಬ್ಲಾಕ್ ಸಮೀಪದಲ್ಲೇ ಅಶೋಕಪುರಂ ಪೊಲೀಸ್ ಠಾಣೆ ಇದ್ದರೂ, ಇವರಿಗೆ ಯಾವ ಪೊಲೀಸರ ಭಯವೂ ಇಲ್ಲದಂತಾಗಿದೆ. ಈ ಭಾಗದಲ್ಲಿ ಕೆಲವು ಸಭ್ಯರೆನಿಸಿಕೊಂಡವರೂ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಕುಳಿತು ರಾಜಾರೋಷವಾಗಿ ಮದ್ಯಪಾನ ಮಾಡುವ ಮೂಲಕ ಅನಾಗರಿಕರಂತೆ ವರ್ತಿಸುತ್ತಿದ್ದಾರೆ.

ಮೈಸೂರು ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯಿದ್ದರೂ ಕಡುಕರ ಹಾವಳಿ ಮಿತಿ ಮೀರಿದೆ. ಇದು ಕೇವಲ ಕುವೆಂಪು ನಗರದ ಸಮಸ್ಯೆಯಲ್ಲ, ಮೈಸೂರಿನ ಬಹುತೇಕ ಪಾರ್ಕ್‌ಗಳಲ್ಲಿ ಮತ್ತು ಬೀದಿ ದೀಪಗಳು ಇಲ್ಲದ ಕಡೆಗಳಲ್ಲಿ ಈ ರೀತಿಯ ಸಮಸ್ಯೆ ಸಾಮಾನ್ಯವಾಗಿದೆ. ರಾತ್ರಿ ವೇಳೆ ಕುಡಿದು ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿರುವ ಮದ್ಯವ್ಯಸನಿಗಳ ಹಾವಳಿಗೆ ನಗರದ ಪೊಲೀಸ್ ಕಮಿಷನರ್ ರವರು ಕಡಿವಾಣ ಹಾಕುವುದು ಅಗತ್ಯವಾಗಿದೆ.

 – ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

14 hours ago